ರಾಜ್ಯದ ಎಲ್ಲಾ ಮಲ್ಟಿಫ್ಲೆಕ್ಸ್ ಗಳಲ್ಲಿ ಸಿನಿಮಾ ಟಿಕೆಟ್ಗಳ ಮೇಲೆ ವಿಧಿಸಿದ್ದ 200 ರೂ.ಗಳ ದರ ಮಿತಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ತಡೆಯಾಜ್ಞೆಯನ್ನು ಮುಂದುವರಿಸಿದೆ.ಕರ್ನಾಟಕ ಉಚ್ಚ ನ್ಯಾಯಾಲಯದ ಪ್ರಧಾನ ಪೀಠದಲ್ಲಿ ದಾಖಲಾಗಿದ್ದ, ರಿಟ್ ಅಪೀಲು ಸಂಖ್ಯೆ: 1623/2025ರ (ಕರ್ನಾಟಕ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ವಿರುದ್ಧ, ಮಲ್ಟಿಫ್ಲೆಕ್ಸ್ ಅಸೋಸಿಯೇಷನ್ ಇಂಡಿಯಾ) ಪ್ರಕರಣದಲ್ಲಿ ದಿನಾಂಕ:30.09.2025 ರಂದು ಮಾನ್ಯ ನ್ಯಾಯಾಲಯವು ಸಿನಿಮಾ ಟಿಕೆಟ್ಗಳ ಮೇಲೆ ವಿಧಿಸಿದ್ದ ರೂ.200/-ಗಳ ಮಿತಿಗೆ ದಿನಾಂಕ:23.09.2025ರಂದು ನೀಡಿದ ತಡೆಯಾಜ್ಞೆಯನ್ನು ಮುಂದುವರೆಸುವ ಜೊತೆಗೆ, ಈ ಕೆಳಕಂಡAತೆ ಆದೇಶಿಸಿರುತ್ತದೆ.
ದಾಖಲೆಗಳ ನಿರ್ವಹಣೆ:
ಪ್ರತಿವಾದಿ ಸಂಖ್ಯೆ 1 ಮತ್ತು ಅದರ ಅಡಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಮಲ್ಟಿಫ್ಲೆಕ್ಸ್ ಗಳು, ಮಾರಾಟವಾದ ಪ್ರತಿಯೊಂದು ಟಿಕೆಟ್ ಗೆ ಸಮಗ್ರ ಮತ್ತು ಲೆಕ್ಕಪರಿಶೋಧಿಸಬಹುದಾದ ದಾಖಲೆಗಳನ್ನು ನಿರ್ವಹಿಸಲು ನಿರ್ದೇಶಿಸಲಾಗಿದೆ. ದಾಖಲೆಗಳು ಈ ಕೆಳಗಿನವುಗಳನ್ನು ಒಳಗೊಂಡಿರಬೇಕು.ಮಠಾರಾಟದ ದಿನಾಂಕ ಮತ್ತು ಸಮಯ, ಆನ್ಲೈನ್ ಅಥವಾ ಭೌತಿಕ ಕೌಂಟರ್ ಗಳಲ್ಲಿ ಬುಕಿಂಗ್ ಮಾಡಿರುವ ವಿವರ, ಕ್ರೆಡಿಟ್/ಡೆಬಿಟ್ ಕಾರ್ಡ್, ಯುಪಿಐ ನೆಟ್ ಬ್ಯಾಂಕಿAಗ್ ಅಥವಾ ನಗದು ಪಾವತಿ ಮಾಡಿರುವ ವಿವರ, ಸಂಗ್ರಹಿಸಿದ ಮೊತ್ತ, ಜಿಎಸ್ಟಿ ಘಟಕ.ಎಲ್ಲಾ ನಗದು ವಹಿವಾಟುಗಳಿಗೆ ಡಿಜಿಟಲ್ ಆಗಿ ಪತ್ತೆಹಚ್ಚಬಹುದಾದ ರಸೀದಿಗಳನ್ನು ನೀಡಬೇಕು ಮತ್ತು ಪ್ರತಿದಿನ ಕ್ಯಾಶ್ ರಿಜಿಸ್ಟರ್ ಗಳನ್ನು ಮಲ್ಟಿಫ್ಲೆಕ್ಸ್ ನ ವ್ಯವಸ್ಥಾಪಕರು ಪ್ರತಿ ಸಹಿ ಮಾಡಬೇಕು.
ಎಲೆಕ್ಟಾçನಿಕ್ ವಹಿವಾಟುಗಳು:
ಅರ್ಜಿದಾರರು ಈ ಮೇಲ್ಮನವಿ/ಅರ್ಜಿಯ ಅಂತಿಮ ತೀರ್ಪಿನಲ್ಲಿ ಸಿಲುಕಿದರೆ, ಈ ನಿಬರ್ಂಧದ ಬಾಕಿ ಇರುವ ಸಮಯದಲ್ಲಿ ಎಲೆಕ್ಟಾçನಿಕ್ ವಿಧಾನಗಳ ಮೂಲಕ (ಅನ್ವಯವಾಗುವ ಜಿಎಸ್ಟಿ ಹೊರತುಪಡಿಸಿ) ಸಂಗ್ರಹಿಸಿದ ಎಲ್ಲಾ ಮೊತ್ತವನ್ನು ಟಿಕೆಟ್ ಗಳನ್ನು ಬುಕ್ ಮಾಡಿದ ವೈಯಕ್ತಿಕ ಗ್ರಾಹಕರಿಗೆ ಬುಕಿಂಗ್ ಗೆ ಬಳಸುವ ಅದೇ ಪಾವತಿ ವಿಧಾನದ ಮೂಲಕ ಮರುಪಾವತಿಸಬೇಕು.ಪ್ರತಿವಾದಿ ಸಂಖ್ಯೆ 1 ಇಂದಿನಿAದ 45 ದಿನಗಳಲ್ಲಿ ಪರವಾನಗಿ ಪ್ರಾಧಿಕಾರಕ್ಕೆ ಮರುಪಾವತಿ ಪ್ರಕ್ರಿಯೆ ಯೋಜನೆಯನ್ನು ಅನುಮೋದನೆಗಾಗಿ ಸಲ್ಲಿಸಬೇಕು, ಇದು ಗ್ರಾಹಕರಿಗೆ ಮರುಪಾವತಿ ಮಾಡುವ ಕಾರ್ಯವಿಧಾನವನ್ನು ವಿವರಿಸುತ್ತದೆ. ಪರವಾನಗಿ ಪ್ರಾಧಿಕಾರದಿಂದ ಅನುಮೋದನೆಯ ನಂತರ ಅದನ್ನು ಅಂತಿಮ ಅನುಮೋದನೆಗಾಗಿ ಈ ನ್ಯಾಯಾಲಯದ ಮುಂದೆ ಇಡಬೇಕಾಗುತ್ತದೆ.ಈ ಹಿನ್ನೆಲೆಯಲ್ಲಿ, ಸಾರ್ವಜನಿಕರು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪಿನನ್ವಯ, ಹಾಲಿ ಚಲನಚಿತ್ರ ಪ್ರದರ್ಶನಕ್ಕೆ ನೀಡಿರುವ ದರಕ್ಕೆ ಸಂಬAಧಿಸಿದAತೆ ಭೌತಿಕವಾಗಿ ಅಥವಾ ಎಲೆಕ್ಟಾçನಿಕ್ ಮಾಧ್ಯಮದಲ್ಲಿ ಪಡೆದ ಟಿಕೆಟ್ ಗಳನ್ನು ಭದ್ರವಾಗಿ ಕಾಯ್ದಿರಿಸಿಕೊಳ್ಳತಕ್ಕದ್ದು, ಹಾಗೆಯೇ, ಮಲ್ಟಿಫ್ಲೆಕ್ಸ್ ಚಿತ್ರಮಂದಿರಗಳ ಮಾಲೀಕರು ಎಲ್ಲಾ ರೀತಿಯಾ ಸಿನಿಮಾ ಟಿಕೆಟ್ ಗಳ ಮಾರಾಟದ ಸಂಪೂರ್ಣ ದಾಖಲೆಗಳನ್ನು ನಿರ್ವಹಿಸಬೇಕಾಗಿರುತ್ತದೆ.
ಈ ಪ್ರಕರಣದಲ್ಲಿ ಮಾನ್ಯ ಉಚ್ಚ ನ್ಯಾಯಾಲಯವು ರಿಟ್ ಅರ್ಜಿ / ಅಪೀಲು ಸಂಬAಧದಲ್ಲಿ ನೀಡುವ ಅಂತಿಮ ಆದೇಶದಲ್ಲಿ ಅರ್ಜಿದಾರರಿಗೆ ಹಿನ್ನಡೆಯಾದಲ್ಲಿ ಗ್ರಾಹಕರಿಂದ ಸಂಗ್ರಹವಾದ ಹೆಚ್ಚುವರಿ ಮೊಬಲಗನ್ನು ಅವರುಗಳು ಪಾವತಿಸಿದ ವಿಧಾನದಲ್ಲಿಯೇ ಹಿಂದಿರುಗಿಸಲು ಅನುಕೂಲವಾಗುವಂತೆ ಅರ್ಜಿದಾರರು, ರಾಜ್ಯ ಹಾಗೂ ಗ್ರಾಹಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮೇಲಿನ ನಿರ್ದೇಶನಗಳನ್ನು ನೀಡಿರುತ್ತದೆ ಎಂದು ಒಳಾಡಳಿತ ಇಲಾಖೆಯ (ಸೆರೆಮನೆ ಮತ್ತು ಸಿನಿಮಾ) ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಹಾಗೂ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







