Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ಪ್ರಮುಖ ಸುದ್ದಿ»ಹರ್ಷವರ್ಧನ್ ಶ್ರಿಂಗ್ಲಾ, ನಿಕಮ್ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿದ ರಾಷ್ಟ್ರಪತಿ
ಪ್ರಮುಖ ಸುದ್ದಿ

ಹರ್ಷವರ್ಧನ್ ಶ್ರಿಂಗ್ಲಾ, ನಿಕಮ್ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿದ ರಾಷ್ಟ್ರಪತಿ

Times of bayaluseemeBy Times of bayaluseemeJuly 13, 2025No Comments2 Mins Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

 

ನವದೆಹಲಿ: ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, 26/11 ಮುಂಬೈ ದಾಳಿ ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕಮ್, ಕೇರಳ ಬಿಜೆಪಿ ನಾಯಕ ಸಿ. ಸದಾನಂದನ್ ಮಾಸ್ಟರ್ ಮತ್ತು ಇತಿಹಾಸಗಾರ್ತಿ ಮೀನಾಕ್ಷಿ ಜೈನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿದ್ದಾರೆ.

ಈ ಸಂಬಂಧ ಶನಿವಾರ ತಡರಾತ್ರಿ ಅಧಿಸೂಚನೆ ಹೊರಡಿಸಲಾಗಿದ್ದು, ನಾಲ್ವರನ್ನು ಮೇಲ್ಮನೆಗೆ ರಾಷ್ಟ್ರಪತಿ ನಾಮನಿರ್ದೇಶನ ಮಾಡಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಸಂವಿಧಾನದ 80 (1)ಎ ವಿಧಿಯಡಿ ನೀಡಲಾದ ವಿಶೇಷ ಅಧಿಕಾರದಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಉಜ್ವಲ್ ನಿಕಮ್: ಈ ನಾಮನಿರ್ದೇಶನವನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಉಜ್ವಲ್ ನಿಕಮ್ ಅವರು ವಕೀಲರಾಗಿ ಮಾತ್ರವಲ್ಲದೇ ಪ್ರಮುಖ ಪ್ರಕರಣಗಳಲ್ಲಿ ನ್ಯಾಯಕ್ಕಾಗಿ ಮುಂಚೂಣಿ ಪಾತ್ರ ವಹಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.

ಮುಂಬೈ ದಾಳಿ ಪ್ರಕರಣದಲ್ಲಿ ಸರ್ಕಾರದ ವಕೀಲರಾಗಿ ನಿಕಮ್ ಕಾರ್ಯ ನಿರ್ವಹಿಸಿದ್ದಾರೆ. ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮುಂಬೈ ಉತ್ತರ ಕೇಂದ್ರ ಸ್ಥಾನದಿಂದ ಸ್ಪರ್ಧಿಸಿದ್ದರು.

ಹರ್ಷವರ್ಧನ್ ಶ್ರಿಂಗ್ಲಾ: ಇವರು ರಾಯಭಾರಿಯಾಗಿ ಕೆಲಸ ನಿರ್ವಹಿಸಿದ್ದು, ಭಾರತದ ವಿದೇಶಾಂಗ ನೀತಿಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ನಮ್ಮ ಜಿ-20 ಅಧ್ಯಕ್ಷತೆಯಲ್ಲೂ ನೆರವು ನೀಡಿದ್ದಾರೆ. ಅವರನ್ನು ಮೇಲ್ಮನೆಗೆ ರಾಷ್ಟ್ರಪತಿ ಅವರು ನಾಮನಿರ್ದೇಶನ ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಶ್ರಿಂಗ್ಲಾ ಅವರು ಅಮೆರಿಕ ಮತ್ತು ಥೈಲ್ಯಾಂಡ್ ನ ಭಾರತದ ರಾಯಭಾರಿಯಾಗಿ ಮತ್ತು ಬಾಂಗ್ಲಾದೇಶದ ಹೈ ಕಮಿಷನರ್ ಆಗಿ ಕಾರ್ಯನಿರ್ವಹಿಸಿದ್ದಾರೆ. 1984ರ ಬ್ಯಾಚಿನ ಭಾರತದ ವಿದೇಶಾಂಗ ಸೇವೆ ಅಧಿಕಾರಿಯಾಗಿರುವ ಶ್ರಿಂಗ್ಲಾ, 2023ರಲ್ಲಿ ಭಾರತ ಅಧ್ಯಕ್ಷತೆಯ ಜಿ-20ಯ ಮುಖ್ಯ ಸಮನ್ವಯಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ಡಾ. ಮೀನಾಕ್ಷಿ ಜೈನ್ ಅವರನ್ನು ರಾಜ್ಯಸಭೆಗೆ ರಾಷ್ಟ್ರಪತಿ ನಾಮನಿರ್ದೇಶನ ಮಾಡಿರುವುದು ಅತೀವ ಸಂತಸದ ವಿಷಯವಾಗಿದೆ. ಇತಿಹಾಸಗಾರ್ತಿ, ಸಂಶೋಧಕರಾಗಿರುವ ಅವರು, ಶಿಕ್ಷಣ, ಸಾಹಿತ್ಯ, ಇತಿಹಾಸ ಮತ್ತು ರಾಜಕೀಯ ಕ್ಷೇತ್ರದಲ್ಲಿ ಮಹೋನ್ನತ ಸೇವೆ ಸಲ್ಲಿಸಿದ್ದಾರೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಜೈನ್ ಅವರು ದೆಹಲಿ ವಿವಿಯ ಗಾರ್ಗಿ ಕಾಲೇಜಿನ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದು, ಅವರಿಗೆ ಪದ್ಮಶ್ರಿ ಪ್ರಶಸ್ತಿಯೂ ಸಂದಿದೆ. ಭಾರತದ ಇತಿಹಾಸ, ನಾಗರಿಕತೆ ಮತ್ತು ಬ್ರಿಟಿಷ್ ಅವಧಿಯಲ್ಲಿನ ಭಾಷೆಗಳು ಸೇರಿದಂತೆ ಅನೇಕ ಪುಸ್ತಕಗಳನ್ನು ಬರೆದಿದ್ದಾರೆ.

ರಾಜ್ಯಸಭೆ ಪ್ರವೇಶ ಅಧಿಕೃತ: ಡಿಎಂಕೆ ಸಂಸದೆಯಾಗಿ ಕವಯಿತ್ರಿ ಸಲ್ಮಾ ಕೂಡ ಮೇಲ್ಮನೆಗೆ

ಸದಾನಂದನ್ ಮಾಸ್ಟರ್ ಅವರ ಜೀವನವು ಧೈರ್ಯ ಮತ್ತು ಅನ್ಯಾಯಕ್ಕೆ ತಲೆಬಾಗಲು ನಿರಾಕರಿಸುವ ಪ್ರತಿರೂಪವಾಗಿದೆ ಎಂದು ಮೋದಿ ಹೇಳಿದ್ದಾರೆ. ಶಿಕ್ಷಕ, ಸಮಾಜ ಸೇವಕರಾಗಿಯೂ ಅವರ ಶ್ರಮ ಶ್ಲಾಘನೀಯವಾಗಿದೆ.ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಕ್ಕಾಗಿ ರಾಷ್ಟ್ರಪತಿ ಅವರಿಗೆ ಅಭಿನಂದನೆಗಳು ಎಂದು ಪ್ರಧಾನಿ ಸಾಮಾಜಿಕ ಜಾಲತಾಣ ಎಕ್ಸ್ ಸಂದೇಶದಲ್ಲಿ ಶುಭ ಹಾರೈಸಿದ್ದಾರೆ. ಮಾಜಿ ಶಿಕ್ಷಕರಾಗಿರುವ ಸದಾನಂದನ್ ಅವರು ಕೇರಳದ ಕಣ್ಣೂರು ಜಿಲ್ಲೆಯಲ್ಲಿ 2016 ಮತ್ತು 2021 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.1994ರಲ್ಲಿ ಪಕ್ಷ ಬದಲಾಯಿಸಿದ ನಂತರ ಅವರ ಎರಡೂ ಕಾಲುಗಳನ್ನು ಎದುರಾಳಿಗಳು ಕತ್ತರಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
Harshavardan mumbai shingla
Follow on Google News Follow on Instagram
Share. Facebook Twitter Telegram WhatsApp
Previous Articleಸಿಎಂ ಸಿದ್ದರಾಮಯ್ಯಗೆ ಏಕವಚನದಲ್ಲಿ ಬೈದ ಸಬ್ ರಿಜಿಸ್ಟ್ರಾರ್ – ಮುಂದೇನಾಯ್ತು ಗೊತ್ತಾ..?
Next Article ತೆಲುಗು ಚಿತ್ರರಂಗದ ಹಿರಿಯ ನಟ ಶ್ರೀನಿವಾಸ ರಾವ್ ಇನ್ನಿಲ್ಲ
Times of bayaluseeme
  • Website

Related Posts

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ – ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

July 27, 2025

ಪತ್ರಿಕೋದ್ಯಮ ಯಾರ ಪರವಾಗಿ ಕನ್ನಡಿ ಹಿಡಿಯುತ್ತಿದೆ ಎಂಬುದನ್ನು ಅರಿಯಬೇಕು – ಕೆ.ವಿ.ಪ್ರಭಾಕರ್

July 27, 2025

ನಟ ಪ್ರಥಮ್ ಗೆ ಜೀವ ಬೆದರಿಕೆ; ಘಟನೆಯಲ್ಲಿ ರಕ್ಷಕ್ ಬುಲೆಟ್ ಬಂದಿದ್ದೇಕೆ..?

July 27, 2025
Add A Comment
Leave A Reply Cancel Reply

Advertisement
Latest Posts

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ – ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.