ಕಳೆದ ಕೆಲವು ದಿನಗಳಿಂದ ದಾವಣಗೆರೆಯಲ್ಲಿ ಕೆಲವು ಮುಖಂಡರು ಚಿತ್ರದುರ್ಗ ಜಿಲ್ಲೆಗೆ ಕುಡಿಯುವ ನೀರನ್ನು ಕೊಡಬಾರದೆಂದುಹೋರಾಟ ಮಾಡುತ್ತಿದ್ದಾರೆ.ಯಾರು ಸಹ ತಿನ್ನುವ ಅನ್ನಕ್ಕೆ, ಕುಡಿಯುವ ನೀರಿಗೆ ಅಡ್ಡಿಪಡಿಸುವುದು ಅಕ್ಷಮ್ಯ ಅಪರಾಧ ಅದನ್ನುತೀವ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಚಿತ್ರದುರ್ಗ ನಗರದ ಬಿಜೆಪಿ ಪಕ್ಷದ ಕಛೇರಿಯಲ್ಲಿ ಪತ್ರಿಕಾಗೋಷ್ಠಿ
ಚಿತ್ರದುರ್ಗ ನಗರದ ಬಿಜೆಪಿ ಪಕ್ಷದ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನವು ಅನ್ನಕ್ಕೆ, ನೀರಿಗೆ ಬೇಲಿಹಾಕಿಲ್ಲ.. ನಾನು ವಿನಂತಿ ಮಾಡುತ್ತೇನೆ ಯಾವುದೇ ಕಾರಣಕ್ಕೂ ಈಗಾಗಲೇ ಪೂರ್ಣಗೊಂಡಿರುವ ಯೋಜನೆಯನ್ನುನಿಲ್ಲಿಸಬಾರದು.ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಕುಡಿಯುವ ನೀರನ್ನು ಒದಗಿಸುವ ಸಲುವಾಗಿ 800 ಕೋಟಿ ರೂವೆಚ್ಚದಲ್ಲಿ ನಮ್ಮ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದಾಗ ಯೋಜನೆ ರೂಪಿಸಿ ಹಣ ಬಿಡುಗಡೆ ಮಾಡಿದ ಯೋಜನೆ.ಈ ಯೋಜನೆಯನ್ನುಉದ್ಘಾಟನೆ ಮಾಡಿ ನೀರು ಒದಗಿಸಬೇಕು ಆದರೆ ಇದಕ್ಕೆ ಅಡ್ಡಿಪಡಿಸುವುದು ಎಷ್ಟು ಸೂಕ್ತ.ಸುಪ್ರೀಂ ಕೋರ್ಟ್ ಕುಡಿಯುವ ನೀರುಒದಗಿಸುವ ಬಗ್ಗೆ ಹಲವು ಆದೇಶವನ್ನು ಮಾಡಿದೆ.. ಇದಕ್ಕೆ ಏರಿಯಾ ಮಿತಿಯಿಲ್ಲ ಎಂದರು.
ಕೃಷ್ಣಾ ನದಿಯಿಂದ ಮಹಾರಾಷ್ಟ್ರಕ್ಕೆ ಕುಡಿಯುವ ನೀರನ್ನು ಕೊಟ್ಟಿದ್ದೇವೆ
ಕೃಷ್ಣಾ ನದಿಯಿಂದ ಮಹಾರಾಷ್ಟ್ರಕ್ಕೆ ಕುಡಿಯುವ ನೀರನ್ನು ಕೊಟ್ಟಿದ್ದೇವೆ.. ಹಾಗೆಯೇ ನಮ್ಮಲ್ಲಿ ಕೃಷ್ಣಾ ಭೀಮ ನದಿ ಒಣಗಿದಾಗಮಹಾರಾಷ್ಟ್ರದಿಂದ ಕುಡಿಯುವ ನೀರು ಕೊಡುತ್ತಾರೆ.ಚಿತ್ರದುರ್ಗ – ದಾವಣಗೆರೆ ಜಗಳ ಪಾಕಿಸ್ತಾನ ಹಿಂದುಸ್ತಾನ
ಜಗಳವಲ್ಲಈಗಾಗಲೇ ಕಾಮಗಾರಿ ಪೂರ್ಣಗೊಂಡಿದ್ದು ಟ್ರಯಲ್ ರನ್ ಮಾಡುತ್ತಿದ್ದಾರೆ.. ಟ್ರಯಲ್ ರಂದು ಮಾಡಿ ನೀರು
ಹರಿಸಬೇಕು.. ಮಾನ್ಯ ಮುಖ್ಯಮಂತ್ರಿ ಸ್ವತಃ ಯೋಜನೆಯನ್ನು ಲೋಕಾರ್ಪಣೆ ಮಾಡಬೇಕೆಂದು ಆಗ್ರಹಿಸುತ್ತೇನೆ
ಆರ್ ಎಸ್ ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ಸಂವಿಧಾನ ಪೀಠಿಕೆಯಲ್ಲಿ ಸಮಾಜವಾದ,ಜಾತ್ಯಾತೀತ ಪದ ವಿಚಾರ..1975ರಲ್ಲಿ ಪ್ರಧಾನಿ ಇಂದಿರಾ ತುರ್ತು ಪರಿಸ್ಥಿತಿ ಜಾರಿ ಮಾಡಿದ್ದರು.. ಸಂವಿಧಾನ ಅಮಾನತ್ತಿನಲ್ಲಿಟ್ಟುಅನೇಕರನ್ನು ಜೈಲಲ್ಲಿಟ್ಟಿz.ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ಧರಾಮಯ್ಯ ಕ್ಷಮೆಕೇಳಬೇಕು.ಅಂಬೇಡ್ಕರ್ ಅವರೇ ತಿರಸ್ಕರಿಸಿದ್ದನ್ನು ತುರ್ತು ಪರಿಸ್ಥಿತಿ ಕಾಲದಲ್ಲಿ ಸೇರಿಸಿದ್ದಾರೆ..ಹೊಸಬಾಳೆ ಅವರು ದೇಶದ ಜನತೆಗೆ ಚರ್ಚೆಗೆ ಬಿಟ್ಟಿದ್ದಾರೆ..
ಕಾಂಗ್ರೆಸ್ ಅಂಬೇಡ್ಕರ್, ಸಂವಿಧಾನಕ್ಕೆ ಗೌರವ ನೀಡಿಲ್ಲ..ಸಂವಿಧಾನ ಅಮಾನತ್ತಿನಲ್ಲಿಟ್ಟು ವಿಕಾರಗೊಳಿಸಿದಕಾಂಗ್ರೆಸ್ ಪಕ್ಷ.. ಕ್ಷಮೆ ಕೇಳಬೇಕು ಎಂದರು.ಪತ್ರಿಕಾ ಗೋಷ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್, ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಮಾಜಿ ಶಾಸಕಎಸ್.ಕೆ.ಬಸವರಾಜನ್, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಖಂಜಾಚಿ ಮಾಧುರಿ ಗೀರೀಶ್, ವಕ್ತಾರ ನಾಗರಾಜ್ ಬೇದ್ರೇ,ಹೊಸದುರ್ಗ ಪುರಸಭೆಯ ಉಪಾಧ್ಯಕ್ಷರಾಧ ಗೀರಿಜ, ರಾಜೇಶ್ವರಿ ಆನಂದ್, ನಗರಾಧ್ಯಕ್ಷ ಲೋಕೇಶ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಜಿ.ಪಂ.ಮಾಜಿ ಸದಸ್ಯ ಗುರುಸ್ವಾಮಿ ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



