ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸರಸ್ವತಿ ಸಮ್ಮಾನ್, ಪದ್ಮಭೂಷಣ ಪುರಸ್ಕೃತ ಸಾಹಿತಿ, ಡಾ. ಎಸ್ ಎಲ್ ಭೈರಪ್ಪನವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಭೈರಪ್ಪನವರ ಸ್ಮಾರಕ ನಿರ್ಮಿಸುವುದಾಗಿ ಘೋಷಿಸಿದರು. ಭೈರಪ್ಪನವರ ಕುಟುಂಬಸ್ಥರೊಂದಿಗೆ ಕೆಲ ಹೊತ್ತು ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೈರಪ್ಪ ಅವರು ಹೆಚ್ಚು ಸಮಯ ಮೈಸೂರಿನಲ್ಲಿಯೇ ಇದ್ದರು. ಹೀಗಾಗಿ ಮೈಸೂರಿನಲ್ಲಿಯೇ ಅವರ ಸ್ಮಾರಕ ನಿರ್ಮಿಸಲಾಗುವುದು ಎಂದರು. ಭೈರಪ್ಪರ ಹಲವು ಕಾದಂಬರಿಗಳು ಹಲವು ಭಾಷೆಗಳಿಗೆ ಅನುವಾದಗೊಂಡಿವೆ. ಕನ್ನಡದ ಯಾವ ಸಾಹಿತಿಯ ಯಾವ ಕೃತಿಗಳೂ ಇಷ್ಟು ಭಾಷೆಗೆ ಅನುವಾದಗೊಂಡಿಲ್ಲ. ಅವರಿಗೆ ಸರಸ್ವತಿ ಸಮ್ಮಾನ್, ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳು ಬಂದಿವೆ. ಜ್ಞಾನಪೀಠ ಪ್ರಶಸ್ತಿಗೂ ಅರ್ಹರಾಗಿದ್ದು ಸಿಕ್ಕರೆ ನಿಜಕ್ಕೂ ಖುಷಿ ವಿಷಯ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







