Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ನಮ್ಮ ಚಿತ್ರದುರ್ಗ»ಕಲ್ಲವ್ವನಾಗತಿಹಳ್ಳಿ ಗ್ರಾಮದಲ್ಲಿ ನೂತನ ಚೆಕ್‍ಡ್ಯಾಂ ಹಾಗೂ ಸಿ.ಸಿ.ರಸ್ತೆ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪನವರಿಂದ ಭೂಮಿಪೂಜೆ.
ನಮ್ಮ ಚಿತ್ರದುರ್ಗ

ಕಲ್ಲವ್ವನಾಗತಿಹಳ್ಳಿ ಗ್ರಾಮದಲ್ಲಿ ನೂತನ ಚೆಕ್‍ಡ್ಯಾಂ ಹಾಗೂ ಸಿ.ಸಿ.ರಸ್ತೆ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪನವರಿಂದ ಭೂಮಿಪೂಜೆ.

Times of bayaluseemeBy Times of bayaluseemeJuly 2, 2025No Comments2 Mins Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ಹೊಳಲ್ಕೆರೆ : ಚುನಾವಣೆಗೆ ಇನ್ನು ಮೂರು ವರ್ಷಗಳ ಸಮಯವಿದೆ. ನಾನು ಮತ ಕೇಳಲು ಬಂದಿಲ್ಲ. ನಿಮ್ಮೆಲ್ಲರ ಋಣ ತೀರಿಸಿ
ನೀವುಗಳು ನನಗೆ ಮತ ನೀಡಿ ಗೆಲ್ಲಿಸಿದ್ದಕ್ಕೆ ಬೆಲೆ ಕೊಡಲು ಬಂದಿದ್ದೇನೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.
ತಾಲ್ಲೂಕಿನ ಕಲ್ಲವ್ವನಾಗತಿಹಳ್ಳಿ ಗ್ರಾಮದಲ್ಲಿ 3.50 ಕೋಟಿ ರೂ.ವೆಚ್ಚೆದಲ್ಲಿ ಎರಡು ನೂತನ ಚೆಕ್‍ಡ್ಯಾಂ ಹಾಗೂ ಸಿ.ಸಿ.ರಸ್ತೆ
ಕಾಮಗಾರಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು ಹದಿನೈದು ವರ್ಷದ ಕೆಳೆಗೆ ಡಾಂಬರ್ ರಸ್ತೆ ಮಾಡಿಸಿದ್ದೆ. ಇದುವರೆವಿಗೂ ಒಂದು ಕಲ್ಲು ಕೂಡ ಕಿತ್ತಿಲ್ಲ. ಅಷ್ಟು ಗಟ್ಟಿಮುಟ್ಟಾಗಿದೆ.ಚೆಕ್‍ಡ್ಯಾಂನಲ್ಲಿ ನೀರು ತುಂಬಿದರೆ ಸುತ್ತಮುತ್ತಲಿನ ಬೋರ್‍ವೆಲ್‍ಗಳಲ್ಲಿ ನೀರು ಚಿಮ್ಮುವುದರಿಂದ ರೈತರಿಗೆ ಅನುಕೂಲವಾಗುತ್ತದೆ.ಜಗಳೂರು ತಾಲ್ಲೂಕಿನಿಂದ ಹಿಡಿದು ತರಿಕೆರೆವರೆಗೂ ನನ್ನ ಕ್ಷೇತ್ರ ವ್ಯಾಪಿಸಿದೆ. 493 ಹಳ್ಳಿಗಳಲ್ಲಿ ಯಾರು ಏನೆ ಕೇಳಲಿ ಬಿಡಲಿ ಎಲ್ಲಿಯಾವ ಕೆಲಸ ಮಾಡಿದರೆ ಜನರಿಗೆ ಅನುಕೂಲವಾಗುತ್ತದೆಂಬ ಆಲೋಚನೆಯಿಟ್ಟುಕೊಂಡು ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ
ಹಗಲು-ರಾತ್ರಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆಂದು ಹೇಳಿದರು.

ತಾಲ್ಲೂಕಿನಾದ್ಯಂತ ಎಲ್ಲೆಡೆ ಗುಣಮಟ್ಟದ ಸಿ.ಸಿ.ರಸ್ತೆ, ಕೆರೆ ಕಟ್ಟೆಗಳಿಗೆ ನೀರು ತುಂಬಿಸುವುದು, ಚೆಕ್‍ಡ್ಯಾಂ ನಿರ್ಮಾಣ, ಬ್ರಿಟೀಷರಕಾಲದ ಶಾಲೆಗಳನ್ನು ಕೆಡವಿ ಅತ್ಯುತ್ತಮ ಕಟ್ಟಡಗಳನ್ನು ಕಟ್ಟಿಸಿದ್ದೇನೆ. ಪ್ರೌಢಶಾಲೆ, ಪಿ.ಯು. ಡಿಗ್ರಿ ಕಾಲೇಜು, ಐಟಿಐ. ಪಾಲಿಟೆಕ್ನಿಕ್,ವಸತಿ ಶಾಲೆಗಳ ನಿರ್ಮಾಣವಾಗಿದೆ. ಬಡವರಿಗೆ ಸುಲಭವಾಗಿ ಚಿಕಿತ್ಸೆ ಸಿಗಲಿ ಎನ್ನುವ ಉದ್ದೇಶದಿಂದ ಹೈಟೆಕ್ ಆಸ್ಪತ್ರೆಗಳನ್ನುಕಟ್ಟಿಸಿದ್ದೇನೆ. ತಾಲ್ಲೂಕಿನಾದ್ಯಂತ ಪ್ರತಿ ಮನೆ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವುದಕ್ಕಾಗಿ ಹಿರಿಯೂರಿನವಾಣಿವಿಲಾಸಸಾಗರದಿಂದ ನೀರು ತರುವುದಕ್ಕಾಗಿ 367 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇನೆ. ರೈತರ ತೋಟಗಳುಒಣಗಬಾರದೆಂದು ಹದಿನೇಳು ಕಡೆ ವಿದ್ಯುತ್ ಪವರ್ ಸ್ಟೇಷನ್ ಕಟ್ಟಿಸಿದ್ದೇನೆ. ಇಷ್ಟು ಸಾಲದೆಂಬಂತೆ ಚಿಕ್ಕಜಾಜೂರಿನ ಕೋಟೆಹಾಳ್ಬಳಿ ಹದಿಮೂರುವರೆ ಎಕರೆ ಜಾಗದಲ್ಲಿ ಐದುನೂರು ಕೋಟಿ ರೂ.ಗಳ ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ ನಿರ್ಮಾಣವಾಗಲಿದೆ.

ಜೋಗ್‍ಫಾಲ್ಸ್‍ನಿಂದ ನೇರವಾಗಿ ಇಲ್ಲಿಗೆ ವಿದ್ಯುತ್ ಪೂರೈಕೆಯಾಗಲಿದ್ದು, ಇದರಿಂದ ರೈತರಿಗೆ ಇನ್ನು ನೂರು ವರ್ಷಗಳ ಕಾಲಕರೆಂಟ್‍ನ ಅಭಾವವಿರುವುದಿಲ್ಲ ಎಂದರು.ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತ ಮಹಾದೇವಪ್ಪ, ಸದಸ್ಯರುಗಳಾದ ದೇವರಾಜ್, ಪರಮೇಶ್ವರ್‍ನಾಯ್ಕ, ಇ.ಸಿ.ಓ. ಬಸವರಾಜಪ್ಪ,ಎಸ್.ಡಿ.ಎಂ.ಸಿ. ಅಧ್ಯಕ್ಷ ಕೆ.ರಾಜು
ರುದ್ರೆಗೌಡ್ರು, ಸಿದ್ದಪ್ಪ, ಕುಮಾರಸ್ವಾಮಿ, ಮಹೇಶ್, ಶಿವಮೂರ್ತಿ, ಸತೀಶ್, ರಾಜು, ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್‍ಗಳಾದಆನಂದಪ್ಪ, ನವೀನ್ ಹಾಗೂ ಗ್ರಾಮದ ಮುಖಂಡರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
chekdam kallavanagati halli mla chandrappa
Follow on Google News Follow on Instagram
Share. Facebook Twitter Telegram WhatsApp
Previous Articleಉದ್ಯೋಗ ಆಧರಿತ ಪ್ರೋತ್ಸಾಹಧನ (ಇಎಲ್ಐ) ಯೋಜನೆಗೆ ಅನುಮೋದನೆ – ಕೇಂದ್ರ ಸಂಪುಟ ಸಭೆಯಲ್ಲಿ ನಿರ್ಧಾರ
Next Article ಚಳ್ಳಕೆರೆ ನಗರಸಭೆ ನೂತನ ಅಧ್ಯಕ್ಷರಾಗಿ ಶಿಲ್ಪ ಮುರಳಿ ಅವಿರೋಧ ಆಯ್ಕೆ.
Times of bayaluseeme
  • Website

Related Posts

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

July 27, 2025

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

July 27, 2025

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

July 27, 2025
Add A Comment
Leave A Reply Cancel Reply

Advertisement
Latest Posts

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ – ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.