ಚಿತ್ರದುರ್ಗ : ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಯುವ ಕರ್ನಾಟಕ ವೇದಿಕೆಗೆ ಪದಾಧಿಕಾರಿಗಳನ್ನು ಆಯ್ಕೆ
ಮಾಡಲಾಯಿತು.ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ರೂಪೇಶ್ ರಾಜಣ್ಣ ಅನುಮತಿ ಮೇರೆಗೆ ರೈತ ಘಟಕದ ಮಹಿಳಾ ಜಿಲ್ಲಾಧ್ಯಕ್ಷೆಯಾಗಿ ಶಶಿಕಲಾ,ಉಪಾಧ್ಯಕ್ಷರಾಗಿ ಶಿವಮ್ಮ, ಹಿರಿಯೂರು ತಾಲ್ಲೂಕು ಅಧ್ಯಕ್ಷರಾಗಿ ಲಕ್ಷ್ಮಿಕಾಂತ ಬಿ. ಚಿತ್ರದುರ್ಗ ತಾಲ್ಲೂಕು ಉಪಾಧ್ಯಕ್ಷರಾಗಿ ಸತೀಶ್,ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ್ ಇವರುಗಳನ್ನು ನೇಮಕ ಮಾಡಲಾಯಿತೆಂದು ಯುವ ಕರ್ನಾಟಕ ವೇದಿಕೆ ಜಿಲ್ಲಾಧ್ಯಕ್ಷರವಿಕುಮಾರ್ನಾಯ್ಕ ತಿಳಿಸಿದ್ದಾರೆ. ವೇದಿಕೆ ಕಾರ್ಯಾಧ್ಯಕ್ಷ ಓಬಣ್ಣ ಎನ್. ಜಿಲ್ಲಾ ಉಪಾಧ್ಯಕ್ಷ ನಂಜಣ್ಣ, ಕಾರ್ಮಿಕ ಘಟಕದ ಅಧ್ಯಕ್ಷಸೈಯದ್ ಅಲಿ, ಖಜಾಂಚಿ ಯಶವಂತ್, ಜಗದೀಶ್, ಸಚಿನ್, ನಾಗರಾಜ್, ನಾಗೇಶ್ ಟಿ. ಮಹೇಶ್ವರಪ್ಪ, ವಿನಯ್, ಗಿರೀಶ್ ಟಿ.ನಾಗರಾಜ್, ರವಿಕುಮಾರ್, ಮಂಜುನಾಥ್ ಇವರುಗಳು ಸಭೆಯಲ್ಲಿ ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



