ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆಯಿಲ್ಲ. 2028 ರವರೆಗೆ ನಾನೇ ಮುಖ್ಯಮಂತ್ರಿ ಎಂದು ದೆಹಲಿಯಲ್ಲಿ ಸಿದ್ದರಾಮಯ್ಯ ಶಾಕ್ ನೀಡಿದ ಬೆನ್ನಲ್ಲೇ, ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು ಎಂದು ಪುನರುಚ್ಚರಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬದಲಾವಣೆ ಆಗಬೇಕು. ಈ ಬಗ್ಗೆ ಸಾಕಷ್ಟು ಬಾರಿ ಹೇಳಿದ್ದೇವೆ. ಕೆಪಿಸಿಸಿ ಅಧ್ಯಕ್ಷರು ಬದಲಾಗಬೇಕು. ಪದೇ ಪದೆ ಹೇಳುವ ಅವಶ್ಯಕತೆ ಇಲ್ಲ. ಎಲ್ಲವನ್ನೂ ಹೈಕಮಾಂಡ್ ಗಮನಿಸುತ್ತಿದೆ. ಸೂಕ್ತ
ನಿರ್ಧಾರವನ್ನು ಹೈಕಮಾಂಡ್ ನಾಯಕರು ಮಾಡುತ್ತಾರೆ ಎಂದು ಹೇಳಿದ್ದಾರೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಎಲ್ಭೇಟಿ ಕುರಿತು ಗುರುವಾರವೇ ಮಾತನಾಡಿದ್ದೇನೆ. ಊಟಕ್ಕಾಗಿ ಸೇರಿದ್ದೇವೆಯೇ ವಿಶೇಷ ಇಲ್ಲ ಎಂದರು. ಹೊರತುಭೇಟಿ ವೇಳೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚಿಸಿದಿರಾ? ಎಂಬ ಪ್ರಶ್ನೆಗೆ, ‘ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ಆಗಿಲ್ಲ, ಸಮಯ ಬಂದಾಗ ಹೈಕಮಾಂಡ್ ಮಾಡಲಿದೆ.ನಾವು ಈಗಾಗಲೇ ಹೇಳಬೇಕಾದ್ದನ್ನು ಹೇಳಿದ್ದೇವೆ’ ಎಂದಷ್ಟೇ ಹೇಳಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



