Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ನಟ ಪ್ರಥಮ್ ಗೆ ಜೀವ ಬೆದರಿಕೆ; ಘಟನೆಯಲ್ಲಿ ರಕ್ಷಕ್ ಬುಲೆಟ್ ಬಂದಿದ್ದೇಕೆ..?

ಏರ್ ಇಂಡಿಯಾ ದುರಂತ; ಮೃತಪಟ್ಟ 147 ಕುಟುಂಬಗಳಿಗೆ ಮಧ್ಯಂತರ ಪರಿಹಾರ ಬಿಡುಗಡೆ

ಆಪರೇಷನ್ ಸಿಂಧೂರ್ ಕುರಿತು ವಿಶೇಷ ಶೈಕ್ಷಣಿಕ ಪಠ್ಯ..?

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ಅಪರಾಧ ಸುದ್ದಿ»7 ಗಣಿಗಳಿಗೆ ಅಕ್ರಮವಾಗಿ ಅನುಮತಿ ಕೊಟ್ಟಿದ್ದ ಸಿದ್ದರಾಮಯ್ಯ: ಸಿಎಂ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆರೋಪ
ಅಪರಾಧ ಸುದ್ದಿ

7 ಗಣಿಗಳಿಗೆ ಅಕ್ರಮವಾಗಿ ಅನುಮತಿ ಕೊಟ್ಟಿದ್ದ ಸಿದ್ದರಾಮಯ್ಯ: ಸಿಎಂ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆರೋಪ

Times of bayaluseemeBy Times of bayaluseemeJune 24, 2025Updated:June 24, 2025No Comments2 Mins Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link
  • ಅಕ್ರಮ ಗಣಿಗಾರಿಕೆ; ಹೆಚ್.ಕೆ. ಪಾಟೀಲ್‌ ಪತ್ರವನ್ನು ಕಸದ ಬುಟ್ಟಿಗೆ ಹಾಕಿ ಎಂದು ಕೇಂದ್ರ ಸಚಿವರ ಗುಡುಗು
  • ಜನ 5 ವರ್ಷ ಅಧಿಕಾರ ಕೊಟ್ಟರೆ ಹೆಚ್.ಕೆ. ಪಾಟೀಲ್ ಪತ್ರಕ್ಕೆ ಉತ್ತರ ಕೊಡುತ್ತೇನೆ

ನವದೆಹಲಿ: ಅಕ್ರಮ ಗಣಿಗಾರಿಕೆ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಹೆಚ್.ಕೆ. ಪಾಟೀಲ್‌ ಬರೆದಿರುವ ಪತ್ರವನ್ನು ಕಸದ ಬುಟ್ಟಿಗೆ ಹಾಕಬೇಕು ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗುಡುಗಿದ್ದಾರೆ.

ನವದೆಹಲಿಯ ತಮ್ಮ ಅಧಿಕೃತ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಕಳೆದ ಬಾರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರಾವಧಿಯಲ್ಲಿ ಕಾನೂನುಬಾಹಿರವಾಗಿ ಏಳು ಗಣಿ ಕಂಪನಿಗಳಿಗೆ ಅನುಮತಿ ನೀಡಿದ್ದರು. ಅದರ ಬಗ್ಗೆ ಏನು ಹೇಳುತ್ತೀರಿ ಹೆಚ್.ಕೆ. ಪಾಟೀಲರೇ ಎಂದು ಖಾರವಾಗಿ ಪ್ರಶ್ನಿಸಿದರು.

ರಾಜಕೀಯ ದುರುದೇಶದಿಂದ ಹಾಗೂ ವಸತಿ ಇಲಾಖೆಯಲ್ಲಿ ಎದ್ದಿರುವ ಕಮೀಷನ್‌ ಮುಜುಗರದಿಂದ ಪಾರಾಗಲು ಹೆಚ್.ಕೆ. ಪಾಟೀಲ್‌ ಅವರ ಪತ್ರವನ್ನು ಹೊರಗೆ ಬಿಡಲಾಗಿದೆ ಎಂದು ಅವರು ಕಿಡಿಕಾರಿದರು.

1.5 ಲಕ್ಷ ಕೋಟಿ ಹಗರಣ

ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣದ ಬಗ್ಗೆ ಈಗ ಹೆಚ್.ಕೆ. ಪಾಟೀಲ್ ಎಚ್ಚರಗೊಂಡಿದ್ದಾರೆ. 1.5 ಲಕ್ಷ ಕೋಟಿ ಹಗರಣ ಆಗಿದೆ ಎಂದಿದ್ದಾರೆ. ಎರಡು ವರ್ಷದಿಂದ ತಾವು ಕಾನೂನು ಮಂತ್ರಿಯಾಗಿದ್ದರಿ, ಕುಂಭಕರ್ಣನ ನಿದ್ದೆಯಲ್ಲಿ ಇದ್ರಾ? ಎಂದು ಅವರಗೆ ಪ್ರಶ್ನೆ ಮಾಡಿದರು ಕೇಂದ್ರ ಸಚಿವರು.

ಹೆಚ್.ಕೆ. ಪಾಟೀಲ್ ಅವರು 10 ವರ್ಷಗಳ ಬಳಿಕ ಪತ್ರ ಬರೆದಿದ್ದಾರೆ. ಗ್ರೇಟ್.. ಸಿದ್ದರಾಮಯ್ಯನವರೇ, ಏನು ಮಾಡಿದ್ರೀ ನೀವು ರಾಜ್ಯದ ಸಂಪತ್ತು ಉಳಿಸಲು? ಹೆಚ್.ಕೆ. ಪಾಟೀಲರೇ ಡ್ರಾಮಾ ಬಿಡಿ. ನಿಮ್ಮ ನೇತೃತ್ವದ ಉಪ ಸಮಿತಿ ಕೊಟ್ಟ ವರದಿ ಇಟ್ಟುಕೊಂಡೇ ಸಿದ್ದರಾಮಯ್ಯ ಏನೂ ಮಾಡಿಲ್ಲ. ಈಗ ಪತ್ರ ಬರೆದು ಏನು ಮಾಡುತ್ತೀರಿ? ಅದನ್ನು ತೆಗೆದು ಕಸದಬುಟ್ಟಿಗೆ ಎಸೆಯಿರಿ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದಿರು.

ಕಳೆದ ಬಾರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಕಾನೂನುಬಾಹಿರವಾಗಿ ಏಳು ಗಣಿ ಕಂಪನಿಗಳಿಗೆ ಅನುಮತಿ ನೀಡಿದ್ದರು. ಅಲ್ಲಿ ಏನೆಲ್ಲಾ ನಡೆದಿದೆ ಎನ್ನುವುದು ನಿಮಗೆ ಗೊತ್ತಿಲ್ಲವೇ ಪಾಟೀಲರೇ? ಆ ಬಗ್ಗೆ ಮೌನವೇಕೆ? ಯಾವ ನೈತಿಕತೆ ಇಟ್ಟುಕೊಂಡು ಸಿದ್ದರಾಮಯ್ಯ ಪಕ್ಕದಲ್ಲಿ ಕೂತು ಅಕ್ರಮ ಗಣಿಗಾರಿಕೆ ಬಗ್ಗೆ ಮಾತಾಡುತ್ತಿದ್ದೀರಿ ಹೆಚ್.ಕೆ. ಪಾಟೀಲರೇ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ನಾನು ಸಿದ್ದರಾಮಯ್ಯ ಗಣಿ ಅಕ್ರಮದ ಬಗ್ಗೆ ವಿಧಾನಮಂಡಲದಲ್ಲಿಯೂ ಮಾತನಾಡಿದದೇನೆ. ಏಳು ಗಣಿಗಳಿಗೆ ಸಿದ್ದರಾಮಯ್ಯ ಅವರು ಹಿಂದೆ ಸಿಎಂ ಆಗಿದ್ದಾಗ ಅಕ್ರಮವಾಗಿ ಅನುಮತಿ ನೀಡಿದ್ದಾರೆ. ಎಲ್ಲರ ಬಾಯಿ ಮುಚ್ಚಲು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಇಡಿ, ಐಟಿ ಎಂದು ಕೇಂದ್ರ ಸರಕಾರವನ್ನು ದೂರುತ್ತಿದ್ದಾರೆ. ಹಾಗಾದರೆ ಇವರು ಮಾಡುತ್ತಿರುವುದು ಏನು? ಎಂದು ಅವರು ಕಿಡಿಕಾರಿದರು.

ರಾಜ್ಯದ ಜನರು ನನಗೆ ಶಕ್ತಿ ನೀಡಿ ಮುಂದೆ ಐದು ವರ್ಷ ಅಧಿಕಾರ ಕೊಟ್ಟರೆ ಈ ಹೆಚ್.ಕೆ. ಪಾಟೀಲ್ ಅವರು ಬರೆದ ಪತ್ರಕ್ಕೆ ಉತ್ತರ ಕೊಡುತ್ತೇನೆ. ಎಲ್ಲಾ ದಾಖಲೆಗಳನ್ನೂ ಇಟ್ಟುಕೊಂಡಿದ್ದೇನೆ. 2012ರಲ್ಲಿ ನನ್ನ ವಿರುದ್ಧ ಹಾಕಲಾದ ಕೇಸ್‌ ಅದು. ನನ್ನಿಂದ ರಾಜ್ಯಕ್ಕೆ ನಯಾಪೈಸೆ ನಷ್ಟವಾಗಿಲ್ಲ. ಇವರು ಕೊಳ್ಳೆ ಹೊಡೆದು ವಿದೇಶಗಳಿಗೆ ಅದಿರು, ಹಣ ಸಾಗಿಸಿದ ಹಾಗೆ ನಾನು ಮಾಡಿಲ್ಲ. ಈಗ ಕಾನೂನು ಸಚಿವರು ಪತ್ರ ಬರೆಯುತ್ತಾರೆ. ಯಾಕೆ ಬರೆದಿದ್ದೀರಿ ಪಾಟೀಲರೇ.. ನಮ್ಮನ್ನು ಹೆದರಿಸಲಿಕ್ಕಾ? ನಮ್ಮನ್ನು ಹೆದರಿಸುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ ಎಂದು ಕುಮಾರಸ್ವಾಮಿ ನೇರವಾಗಿ ಹೆಚ್.ಕೆ.ಪಾಟೀಲರಿಗೇ ಟಾಂಗ್‌ ಕೊಟ್ಟರು.

ಈ ಸರಕಾರದ ಸಿಎಂ, ಡಿಸಿಎಂ ಇಬ್ಬರಿಂದ ರಾಜ್ಯ ಹಾಳಾಗುತ್ತಿದೆ. ಕಾಂಗ್ರೆಸ್‌ ಹೈಕಮಾಂಡ್‌ ನಿಜಕ್ಕೂ ನೈತಿಕತೆ ಇದ್ದರೆ ಇವರಿಬ್ಬರ ರಾಜೀನಾಮೆ ತೆಗೆದುಕೊಂಡು ಯಾರಾದರೂ ಉತ್ತಮರಾದ ಮೂರನೇ ವ್ಯಕ್ತಿಯನ್ನು ಸಿಎಂ ಮಾಡಿ ರಾಜ್ಯದ ಮರ್ಯಾದೆ ಉಳಿಸಿ‌. ಉಳಿದ ಮೂರು ವರ್ಷವಾದರೂ ಸರಿಯಾಗಿ ಆಡಳಿತ ಮಾಡಿ ಎಂದು ಹೆಚ್ಡಿಕೆ ಒತ್ತಾಯಿಸಿದರು.

ಸಾಲಮನ್ನಾ; ನಾನು ಬಿಟ್ಟಿ ಪ್ರಚಾರ ಪಡೆದಿಲ್ಲ

ಕುಮಾರಸ್ವಾಮಿ ಸಾಲಮನ್ನಾ ಮಾಡಿ ಪ್ರಚಾರ ಮಾಡಿಕೊಂಡರು. ನಾನು 300 ಕೋಟಿ ತೀರಿಸಿದೆ ಎಂದು ತುಮಕೂರಿನಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾದರೆ, 25000 ಕೋಟಿ ಸಾಲಮನ್ನಾ ಮಾಡಿದ್ದು ಯಾರು? ಸುಖಾಸುಮ್ಮನೆ ಸುಳ್ಳು ಹೇಳುವುದೇಕೆ? ಇಷ್ಟೆಲ್ಲಾ ಆದ ಮೇಲೆಯೂ ಇವರಿಗೆ ಸಿಎಂ ಸ್ಥಾನದಲ್ಲಿ ಮುಂದುವರಿಯುವ ಯೋಗ್ಯತೆ ಇದೆಯಾ? ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
ನವದೆಹಲಿ ಸಿದ್ದರಾಮಯ್ಯ ಹೆಚ್.ಡಿ.ಕುಮಾರಸ್ವಾಮಿ
Follow on Google News Follow on Instagram
Share. Facebook Twitter Telegram WhatsApp
Previous Articleವಸತಿ ಇಲಾಖೆ ಅಕ್ರಮ; ರಾಜ್ಯ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ
Next Article ಸರ್ಕಾರದ ವಿರುದ್ಧ ಹಿರಿಯ ಶಾಸಕ ಅಸಮಾಧಾನ – ಅನುದಾನ ಸಿಗದಿದ್ದಕ್ಕೆ ಆಕ್ರೋಶ
Times of bayaluseeme
  • Website

Related Posts

ವಸತಿ ಇಲಾಖೆ ಅಕ್ರಮ; ರಾಜ್ಯ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

June 23, 2025

ತಂದೆಯನ್ನು ಮನೆಯಿಂದ ಹೊರದಬ್ಬಿದ ಮಕ್ಕಳು*

June 23, 2025

ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್*

June 23, 2025
Add A Comment
Leave A Reply Cancel Reply

Advertisement
Latest Posts

ನಟ ಪ್ರಥಮ್ ಗೆ ಜೀವ ಬೆದರಿಕೆ; ಘಟನೆಯಲ್ಲಿ ರಕ್ಷಕ್ ಬುಲೆಟ್ ಬಂದಿದ್ದೇಕೆ..?

ಏರ್ ಇಂಡಿಯಾ ದುರಂತ; ಮೃತಪಟ್ಟ 147 ಕುಟುಂಬಗಳಿಗೆ ಮಧ್ಯಂತರ ಪರಿಹಾರ ಬಿಡುಗಡೆ

ಆಪರೇಷನ್ ಸಿಂಧೂರ್ ಕುರಿತು ವಿಶೇಷ ಶೈಕ್ಷಣಿಕ ಪಠ್ಯ..?

ಅರಸೀಕೆರೆಯಲ್ಲಿ ಫಲಾನುಭವಿಗಳ ಸಮಾವೇಶ: ಕಾರ್ಯಕ್ರಮದಿಂದ ಸಿಟ್ಟಾಗಿ ಸಿದ್ದು ಎದ್ದು ಹೋಗಿದ್ದೇಕೆ..?

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.