Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ನಮ್ಮ ಚಿತ್ರದುರ್ಗ»ಶೋಷಣೆಯ ಬದುಕು ಬಹುಸಂಖ್ಯಾತರದ್ದಾಗಿತ್ತು ಅವರ ನೋವು ಅರಿಯಲು ಬುದ್ಧ ಸಾಮ್ರಾಜ್ಯವನ್ನು ತ್ಯಜಿಸಿದರು ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.
ನಮ್ಮ ಚಿತ್ರದುರ್ಗ

ಶೋಷಣೆಯ ಬದುಕು ಬಹುಸಂಖ್ಯಾತರದ್ದಾಗಿತ್ತು ಅವರ ನೋವು ಅರಿಯಲು ಬುದ್ಧ ಸಾಮ್ರಾಜ್ಯವನ್ನು ತ್ಯಜಿಸಿದರು ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.

Times of bayaluseemeBy Times of bayaluseemeJune 29, 2025No Comments2 Mins Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ಶೋಷಣೆಯ ಬದುಕು ಬಹುಸಂಖ್ಯಾತರದ್ದಾಗಿತ್ತು ಅವರ ನೋವು ಅರಿಯಲು ಬುದ್ಧ ಸಾಮ್ರಾಜ್ಯವನ್ನು ತ್ಯಜಿಸಿದರು ಎಂದು ಭೋವಿಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.ನಗರದ ಹೊರ ವಲಯದಲ್ಲಿರುವ ಭೋವಿ ಗುರುಪೀಠದಲ್ಲಿ ಪ್ರಜಾಪ್ರಭುತ್ವ ಮತ್ತು ತುರ್ತು ಪರಿಸ್ಥಿತಿ ಕುರಿತ ಸಂವಾದದಲ್ಲಿ
ಮಾತನಾಡಿದ ಅವರು ವೈಭವದ ಜೀವನವನ್ನು ಬುದ್ಧ ತ್ಯಜಿಸಿ ಬಹುಸಂಖ್ಯಾತರ ನೋವಿಗೆ ವಿಮೋಚನೆಯನ್ನು ನೀಡಿದರು. ಅವರಚಿಂತನೆಗಳು ಸಮಾಜದ ಪರಿವರ್ತನೆಗೆ ಬುನಾದಿಯಾಯಿತು ಎಂದು ಹೇಳಿದರು.

ದೇವ ಭಾಷೆಯನ್ನು ಯಾರಾದರೂ ಫಟಿಸಿದರೆ ನಾಲಿಗೆಯನ್ನು ಕತ್ತರಿಸುವ ಕೇಳಿದರೆ ಕಿವಿಗೆ ಸೀಸ ಹೊಯ್ಯುವ ಸಂದರ್ಭವಿತ್ತು
ಅದರಿಂದ ಹೊರ ಬರಲು ಪ್ರಶ್ನಿಸಬೇಕು ಎಂದು ಬುದ್ಧ, ಬಸವ ಹೇಳಿದ್ದಾರೆ. ಪ್ರಶ್ನಿಸಿಕೊಳ್ಳದೆ ಯಾವುದನ್ನು ಒಪ್ಪಬಾರದು ಎಂದಿದ್ದಾರೆ.ಅಲ್ಲಮಪ್ರಭು ದೇವರನ್ನು ಪ್ರಶ್ನಿಸುವ ಪರಿಯನ್ನ ವಚನಗಳಲ್ಲಿ ನೋಡುತ್ತೇವೆ. ಪ್ರಶ್ನೆ ಇಲ್ಲದಿದ್ದರೆ ಅಭಿವೃದ್ಧಿ ಅಭಿವ್ಯಕ್ತಿ ಆಗಲಾರದುಎಂದು ತಿಳಿಸಿದರು.

ಸಂವಿಧಾನದ ಸಮಾನತೆಯ ಆಶಯಗಳು ಈಡೇರಬೇಕಾದರೆ ಪ್ರಶ್ನಿಸುವ ಮನೋಭಾವ ರೂಡಿಮಾಡಿಕೊಳ್ಳಬೇಕು.
ಶಿಕ್ಷಣವಂತರಾಗಿ ಜ್ಞಾನವನ್ನು ಪಡೆದು ಸರಿಯಾದ ಮಾದರಿಯಲ್ಲಿಯೇ ತರ್ಕಿಸುವ ಮನೋಭಾವ ಬೆಳೆಸಿಕೊಳ್ಳಬೇಕು, ಜ್ಞಾನ
ಸರಿದಾರಿಯಲ್ಲಿ ನಡೆಸಿದರೆ ವಿಧ್ಯೆ ಪ್ರಜ್ಞಾವಂತಿಕೆಯನ್ನ ಬಿಡಿಸಿ ಹೇಳುತ್ತದೆ, ಎರಡನ್ನೂ ಪ್ರತಿಪಾದಿಸುವ ಮನೋಧರ್ಮವನ್ನುಬೆಳೆಸಿಕೊಳ್ಳಬೇಕು, ಪ್ರಶ್ನೆ ಕೇಳದವರು ಭಾರತವನ್ನು ವಿಶ್ವಗುರು ಮಾಡಲು ಹೇಗೆ ಸಾಧ್ಯವಾಗುತ್ತದೆ ಎಂದು ಹೇಳಿದರು.ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲಾಗಿತ್ತು, ಆ ಸಂದರ್ಭದಲ್ಲಿ ಕಷ್ಟಗಳನ್ನುಕಂಡರು ಸಹ ಸದೃಢ ಭಾರತವನ್ನ ಕಟ್ಟುವಲ್ಲಿ ಸಂವಿಧಾನದ ಆಶಯಗಳು ನಿರಂತರವಾಗಿ ಕೆಲಸ ಮಾಡುತ್ತಿವೆ. ಸದೃಢ ಭಾರತನಿರ್ಮಾಣಕ್ಕೆ ಮೂಲಭೂತವಾಗಿ ಸಂವಿಧಾನವನ್ನು ಸರಿಯಾದ ಮಾದರಿಯಲ್ಲಿ ಅರ್ಥೈಸಿಕೊಂಡಾಗ ಮಾತ್ರ ಸಂಪೂರ್ಣ ಯಶಸ್ಸುಕಾಣಲು ಸಾಧ್ಯ. ಪ್ರಜೆಗಳನ್ನ ತುಳಿಯಬಾರದು ಎಂದು ಹೇಳಿದರು.

ಗುಜರಾತ್, ಬಿಹಾರದಲ್ಲಿ ಉಂಟಾದ ಹರಾಜಕ ಪರಿಸ್ಥಿತಿ ಮತ್ತು ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿಯನ್ನುಭಾರತದಲ್ಲಿ ಜಾರಿ ಮಾಡಲಾಯಿತು, ವ್ಯವಸ್ಥೆಯಲ್ಲಿ ವಿರೋಧಪಕ್ಷದವರ ಟೀಕೆಗೆ ಹೆಚ್ಚು ಒಳಗಾಗಬೇಕಾಯಿತು, ಕರ್ನಾಟಕದಲ್ಲಿದೇವರಾಜ್ ಅರಸ್ ರವರು ಮುಖ್ಯಮಂತ್ರಿಯಾಗಿದ್ದರಿಂದ ತುರ್ತು ಪರಿಸ್ಥಿತಿಯ ಪರಿಣಾಮ ಕರ್ನಾಟಕದಲ್ಲಿ ಭಿನ್ನವಾಗಿತ್ತು,ಹಿಂದುಳಿದವರ್ಗಗಳ ಆಯೋಗವನ್ನು ರಚಿಸಿ ಹಿಂದುಳಿದ ವರ್ಗಗಳಿಗೆ ವಿವಿಧ ಯೋಜನೆಗಳನ್ನು ಮತ್ತು ಬಡತನ ನಿವಾರಣೆಗೆ 20ಅಂಶಗಳ ಕಾರ್ಯಕ್ರಮ ರೂಪಿಸಿದರು, ಭೂ-ಒಡೆತನ, ಜೀತಪದ್ಧತಿ ನಿರ್ಮೂಲನೆ ಮಾಡಿದರು. ಹಿಂದುಳಿದ ಅಲ್ಪಸಂಖ್ಯಾತ ವರ್ಗಗಳಿಗೆಸಾಮಾಜಿಕ ಸ್ವಾತಂತ್ರ?ಯವನ್ನು ಕಲ್ಪಿಸಿಕೊಟ್ಟರು, ಶಿಕ್ಷಣ ಉದ್ಯೋಗದಲ್ಲಿ ಅವಕಾಶ ಒದಗಿಸುವಂತೆ ಶ್ರಮಿಸಿದರು, ತುರ್ತುಪರಿಸ್ಥಿತಿಯನ್ನ ಉತ್ತಮ ಕಾರ್ಯಗಳಿಗೆ ಉಪಯೋಗಿಸಿಕೊಂಡ ಕೀರ್ತಿ ಅರಸು ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಯಾದವಜ ಗುರುಪೀಠದ ಶ್ರೀ ಕೃಷ್ಣಯಾದವನಂದಾ ಸ್ವಾಮೀಜಿ, ಕುಂಬಾರ ಗುರುಪೀಠದ ಕುಂಬಾರಗುಂಡಯ್ಯಸ್ವಾಮೀಜಿ, ಹಿರಿಯ ಪತ್ರಕರ್ತರಾದ ಎಂ.ಎಸ್.ರಾಜೇಂದ್ರಕುಮಾರ್, ಎ.ಎಸ್.ನಾರಾಯಣಸ್ವಾಮಿ ಮತ್ತು ಮಾಜಿ ಕಾರ್ಮಿಕಅಧಿಕಾರಿ ಎಂ.ಬಾಲಕೃಷ್ಣ, ಭೋವಿ ಗುರುಪೀಠದ ಸಿ.ಇ.ಓ ಗೌನಹಳ್ಳಿ ಗೋವಿಂದಪ್ಪ ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
bhovi gurupeeta life pain
Follow on Google News Follow on Instagram
Share. Facebook Twitter Telegram WhatsApp
Previous Articleರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ ಗಳಾಗಿ ಹೊರಬನ್ನಿ – ಗೃಹ ಸಚಿವ ಜಿ.ಪರಮೇಶ್ವರ
Next Article ಸಾರ್ವಜನಿಕ ಜೀವನದಲ್ಲಿ ಅರಿವಿಟ್ಟುಕೊಂಡು ಬದುಕಿ – ಶಾಸಕ ಎಂ. ಚಂದ್ರಪ್ಪ
Times of bayaluseeme
  • Website

Related Posts

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

July 27, 2025

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

July 27, 2025

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

July 27, 2025
Add A Comment
Leave A Reply Cancel Reply

Advertisement
Latest Posts

ಮೋದಿ ಬಂದ ಮೇಲೆ ರಕ್ಷಣಾ ವ್ಯವಸ್ಥೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ ಗೊತ್ತೇ; ಶಾಸಕ ಎಂ.ಚಂದ್ರಪ್ಪ

ಪ್ರತಿದಿನ ಭಾರತ ಮಾತೆಯ ವೀರ ಪುತ್ರರ ಧೈರ್ಯವನ್ನು ನೆನಪಿಸಿಕೊಳ್ಳಬೇಕು – ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಕಾಂತರಾಜ್ ವರದಿಯನ್ನು ಮೇಲ್ಜಾತಿಯವರು ಮೂಲೆಯಲ್ಲಿ ಕೂರಿಸಿದ್ದಾರೆ – ರಾಮಚಂದ್ರಪ್ಪ

ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ – ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.