Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ರಾಷ್ಟ್ರಮಟ್ಟಕ್ಕೆ ಆರ್‌.ವೈಷ್ಣವಿ ಆಯ್ಕೆ

ಕರಿಯಪ್ಪ ಮಾಳಿಗೆ ನೆಲದ ಮಗ ; ಸಂಶೋಧನೆಯ ಹಾದಿಯಲ್ಲಿ ಮಣ್ಣಿನ ಗುಣ ಹುಡುಕಿದ ಚಿಂತಕ

ರೈತ ಸಮೃದ್ಧಿಯಾಗಿದ್ದರೆ ದೇಶವು ಕೂಡ ಸಮೃದ್ಧಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ಜಾತಿಗಿಂತ ಪ್ರೀತಿ ದೊಡ್ಡದು; ಕುಂಚಿಟಿಗ ಮಠದಲ್ಲಿ ಜಾತ್ಯತೀತ ವಿವಾಹ ಕ್ರಾಂತಿ
ಚಿತ್ರದುರ್ಗ

ಜಾತಿಗಿಂತ ಪ್ರೀತಿ ದೊಡ್ಡದು; ಕುಂಚಿಟಿಗ ಮಠದಲ್ಲಿ ಜಾತ್ಯತೀತ ವಿವಾಹ ಕ್ರಾಂತಿ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 29, 2026Updated:March 29, 2026No Comments2 Mins Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಜಾತಿಗಿಂತ ಪ್ರೀತಿ ದೊಡ್ಡದು; ಕುಂಚಿಟಿಗ ಮಠದಲ್ಲಿ ಜಾತ್ಯತೀತ ವಿವಾಹ ಕ್ರಾಂತಿ

ಹೊಸದುರ್ಗ: ಬಸವಾದಿ ಶರಣರ ವಚನಗಳು ಹಾಗೂ ಸಂವಿಧಾನದ ಆಶಯದಂತೆ ಕಳೆದ 28 ವರ್ಷಗಳಿಂದ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠವು ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುತ್ತಿದ್ದು, ಇದುವರೆಗೆ 132 ಜೋಡಿಗಳ ವಿವಾಹಗಳಿಗೆ ಸಾಕ್ಷಿಯಾಗಿದೆ ಎಂದು ಮಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ ಹೇಳಿದರು.

ಪಟ್ಟಣದ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಹೊಸದುರ್ಗ ತಾಲ್ಲೂಕಿನ ಹುಲೇನಹಳ್ಳಿ ಗ್ರಾಮದ ಕುಂಚಿಟಿಗ ಸಮಾಜದ ವರ ರಂಗನಾಥ ಹಾಗೂ ಪಟ್ಟಣದ ಭೋವಿ ಸಮಾಜದ ವಧು ನಂದಿನಿ ಅವರಿಗೆ ಲಿಂಗ ಸಂಸ್ಕಾರ ಹಾಗೂ ದೀಕ್ಷೆ ನೀಡಿದ ನಂತರ ಅವರು ಮಾತನಾಡಿದರು.

ಹೆಣ್ಣು-ಗಂಡು ಒಂದಾದಾಗ ಜಾತಿ-ಧರ್ಮ ಅಡ್ಡಬರಬಾರದು ಎಂಬುದೇ ವಚನ ಧರ್ಮ ಮತ್ತು ಸಂವಿಧಾನ ಧರ್ಮದ ಸಾರವಾಗಿದೆ. ತಮ್ಮ ಪೀಠಾರೋಹಣದಿಂದಲೂ ಅಂತರ್ಜಾತಿ ಹಾಗೂ ಅಂತರ್ ಧರ್ಮ ವಿವಾಹಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದೇವೆ ಎಂದು ತಿಳಿಸಿದರು.

ಅಂತರ್ಜಾತಿ ವಿವಾಹಗಳು ಸಮಾಜದಲ್ಲಿನ ಜಾತಿ ದ್ವೇಷವನ್ನು ಕಡಿಮೆ ಮಾಡಿ, ಜಾತಿ ವ್ಯವಸ್ಥೆಯ ನಿರ್ಮೂಲನೆಗೆ ಹಾಗೂ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ನೆರವಾಗುತ್ತವೆ. ಇಂತಹ ವಿವಾಹಗಳಿಂದ ಸಮಾನತೆ ಮತ್ತು ಭಾತೃತ್ವದ ಮೌಲ್ಯಗಳು ಬಲವಾಗುತ್ತವೆ ಎಂದು ಹೇಳಿದರು.

ಮೊನ್ನೆ (ಶುಕ್ರವಾರ) ಕುಂಚಿಟಿಗ ಸಮಾಜದ ವರ ಹಾಗೂ ನಾಯಕ ಸಮಾಜದ ವಧುವಿಗೆ, ಇಂದು (ಶನಿವಾರ) ಕುಂಚಿಟಿಗ ಸಮಾಜದ ವರ ಮತ್ತು ಭೋವಿ ಸಮಾಜದ ವಧುವಿಗೆ ದೀಕ್ಷಾ ಸಂಸ್ಕಾರ ನೀಡಲಾಗಿದೆ. ಎಲ್ಲರೂ ಸಂವಿಧಾನದ ಆಶಯದಂತೆ ನಡೆದುಕೊಂಡರೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ವೃದ್ಧಿಯಾಗುತ್ತದೆ ಎಂದರು.

ಮಠವು ಕೇವಲ ಆಶೀರ್ವಚನಗಳಿಗೆ ಸೀಮಿತವಾಗದೆ, ಜಾತಿ ನಿರ್ಮೂಲನೆ, ಮೂಢನಂಬಿಕೆಗಳ ನಿವಾರಣೆ ಹಾಗೂ ಸಹೋದರತ್ವದ ಬಾಳ್ವೆಯನ್ನು ಬಲಪಡಿಸುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ. ಸಣ್ಣ ಸಮುದಾಯಗಳ ಪ್ರಗತಿಗೆ ಸಹಕಾರ ನೀಡುವುದು ಪಾರಂಪರಿಕ ಮಠಗಳ ಕರ್ತವ್ಯ ಎಂದು ಅಭಿಪ್ರಾಯಪಟ್ಟರು.

ಕುಂಚಿಟಿಗ ಸಮಾಜದಲ್ಲಿ ಅಂತರ್ಜಾತಿ ವಿವಾಹಕ್ಕೂ ಮೊದಲು ಗುರುಗಳಿಂದ ದೀಕ್ಷೆ ಸ್ವೀಕರಿಸುವುದು ಸಂಪ್ರದಾಯವಾಗಿದೆ. ಸಮಾಜದಲ್ಲಿ ಶಾಂತಿ ಹಾಗೂ ಶಿಸ್ತಿನ ಕಾಪಾಡುವ ನಿಟ್ಟಿನಲ್ಲಿ ಮಠದ ಮಾರ್ಗದರ್ಶನ ಮಹತ್ವದ್ದಾಗಿದೆ.

ಹೆಣ್ಣು-ಗಂಡಿನ ಕುಟುಂಬಗಳು ಸ್ವಯಂ ಪ್ರೇರಣೆಯಿಂದ ಮಠಕ್ಕೆ ಆಗಮಿಸಿ ದೀಕ್ಷೆ ಸ್ವೀಕರಿಸಿ ತಮ್ಮ ಬದುಕನ್ನು ಕಟ್ಟಿಕೊಳ್ಳುತ್ತಿರುವುದು ಸಂತಸದ ವಿಷಯವಾಗಿದೆ. ಮಠವು ಯಾರ ಮೇಲೂ ಒತ್ತಾಯ ಹೇರುವುದಿಲ್ಲ, ಮಾರ್ಗದರ್ಶನ ಮಾತ್ರ ನೀಡುತ್ತದೆ ಎಂದು ಸ್ವಾಮೀಜಿ ಹೇಳಿದರು.

ಬಾಕ್ಸ್:

ಹುಲೇನಹಳ್ಳಿ ಗ್ರಾಮದ ರಂಗನಾಥ ಹಾಗೂ ಹೊಸದುರ್ಗದ ನಂದಿನಿ ಪರಸ್ಪರ ಪ್ರೀತಿಸುತ್ತಿದ್ದು, ಏಪ್ರಿಲ್ 9ರಂದು ವಿವಾಹವಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ ಶ್ರೀ ಶಾಂತವೀರ ಸ್ವಾಮೀಜಿ ಅವರು ಲಿಂಗ ಸಂಸ್ಕಾರ ದೀಕ್ಷೆ ನೀಡಿ ಆಶೀರ್ವಾದಿಸಿದರು.

ಬಾಕ್ಸ್:

ಶುಕ್ರವಾರ ಮಠಕ್ಕೆ ಆಗಮಿಸಿದ್ದ ಕುಂಚಿಟಿಗ ಸಮಾಜದ ವರ ಹಾಗೂ ನಾಯಕ ಸಮಾಜದ ವಧುವಿಗೆ ಲಿಂಗ ಸಂಸ್ಕಾರ ದೀಕ್ಷೆ ನೀಡಲಾಗಿದ್ದು, ಕುಟುಂಬಸ್ಥರು ಮತ್ತು ಭಕ್ತರು ಸಾಕ್ಷಿಯಾಗಿ ಅಂತರ್ಜಾತಿ ವಿವಾಹ ನೆರವೇರಿಸಲಾಯಿತು.

Bangalore chitradurga karanataka ಕರ್ನಾಟಕ ಚಿತ್ರದುರ್ಗ
Follow on Facebook Follow on Instagram
Share. Facebook Twitter WhatsApp Telegram
Previous Articleಭದ್ರಾ ಮೇಲ್ದಂಡೆ ಯೋಜನೆಗೆ ಇನ್ನೂ ₹28,485 ಕೋಟಿ ಅಗತ್ಯ; ಕೇಂದ್ರ ಅನುದಾನಕ್ಕಾಗಿ ರಾಜ್ಯದ ಮನವಿ
Next Article ನ್ಯಾಯದಲ್ಲಿ ರಾಜಿ ಬೇಡ: ಪೊಲೀಸರಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ರಾಷ್ಟ್ರಮಟ್ಟಕ್ಕೆ ಆರ್‌.ವೈಷ್ಣವಿ ಆಯ್ಕೆ

March 29, 2026

ಕರಿಯಪ್ಪ ಮಾಳಿಗೆ ನೆಲದ ಮಗ ; ಸಂಶೋಧನೆಯ ಹಾದಿಯಲ್ಲಿ ಮಣ್ಣಿನ ಗುಣ ಹುಡುಕಿದ ಚಿಂತಕ

March 29, 2026

ಕರುನಾಡಿನ ಜಲಋಷಿ – ರಾಜಸ್ಥಾನದ ಜಲರಕ್ಷಕ: ದೆಹಲಿಯಲ್ಲಿ ಜಲ ಸಂರಕ್ಷಣೆಯ ಮಹಾ ಸಂವಾದ

March 29, 2026
Add A Comment
Leave A Reply Cancel Reply

Advertisement
Latest Posts

ರಾಷ್ಟ್ರಮಟ್ಟಕ್ಕೆ ಆರ್‌.ವೈಷ್ಣವಿ ಆಯ್ಕೆ

ಕರಿಯಪ್ಪ ಮಾಳಿಗೆ ನೆಲದ ಮಗ ; ಸಂಶೋಧನೆಯ ಹಾದಿಯಲ್ಲಿ ಮಣ್ಣಿನ ಗುಣ ಹುಡುಕಿದ ಚಿಂತಕ

ರೈತ ಸಮೃದ್ಧಿಯಾಗಿದ್ದರೆ ದೇಶವು ಕೂಡ ಸಮೃದ್ಧಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

ಕರುನಾಡಿನ ಜಲಋಷಿ – ರಾಜಸ್ಥಾನದ ಜಲರಕ್ಷಕ: ದೆಹಲಿಯಲ್ಲಿ ಜಲ ಸಂರಕ್ಷಣೆಯ ಮಹಾ ಸಂವಾದ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.