Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಸರ್ಕಾರದ ಯೋಜನೆಗಳನ್ನು ಕಾರ್ಮಿಕರು ಸದುಪಯೋಗ ಮಾಡಿಕೊಳ್ಳಬೇಕು – ಸಚಿವ ಸಂತೋಷ್ ಲಾಡ್

ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

ಹೊಸದುರ್ಗ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ಕೊಟ್ಟ ನೂತನ ಜಿ.ಪಂ ಸಿಇಒ

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ದಿನದ ವಿಶೇಷ»ಶ್ರಾವಣ ಮಾಸದಲ್ಲಿ ಬರುವ ನಾಗರ ಪಂಚಮಿಯ ಬಗ್ಗೆ ನಿಮಗೆಷ್ಟು ಗೊತ್ತು..? ನಾಗರ ಪಂಚಮಿಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
ದಿನದ ವಿಶೇಷ

ಶ್ರಾವಣ ಮಾಸದಲ್ಲಿ ಬರುವ ನಾಗರ ಪಂಚಮಿಯ ಬಗ್ಗೆ ನಿಮಗೆಷ್ಟು ಗೊತ್ತು..? ನಾಗರ ಪಂಚಮಿಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

Times of bayaluseemeBy Times of bayaluseemeJuly 29, 2025No Comments2 Mins Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಪ್ರತಿಯೊಂದು ಹಬ್ಬಗಳಿಗೆ ತನ್ನದೇ ಆದಂತಹ ವೈಶಿಷ್ಟ್ಯತೆಗಳಿವೆ. ಅದೇ ರೀತಿಯಾಗಿ ನಾಗರ ಪಂಚಮಿ ಹಬ್ಬಕ್ಕೂ ತನ್ನದೇ ಆದ ಅರ್ಥ ಹೊಂದಿದೆ. ಈ ಹಬ್ಬವನ್ನು ಭಾರತೀಯ ಹೆಣ್ಣು ಮಕ್ಕಳು ಸೇರಿದಂತೆ ಸಕುಟುಂಬ ಸಮೇತವಾಗಿ ನಾಗರ ಪಂಚಮಿ ಹಬ್ಬವನ್ನು ಭಕ್ತಿಯ ಜೊತೆ ಸಡಗರದಿಂದ ಆಚರಿಸಲಾಗುತ್ತದೆ. ಶ್ರಾವಣ ಮಾಸದ ಶುಕ್ಲ ಪಂಚಮಿಯಂದು ನಾಗರ ಹಬ್ಬವನ್ನು ಆಚರಿಸಲಾಗುತ್ತದೆ. ಹಬ್ಬದ ದಿನದಂದು, ಹೆಣ್ಣುಮಕ್ಕಳು ಸಹೋದರನ ಒಳಿತಿಗಾಗಿ ನಾಗ ದೇವತೆಯನ್ನು ಪೂಜಿಸುತ್ತಾರೆ ಮತ್ತು ಹುತ್ತಗಳಿಗೆ ಹಾಲು ಎರೆಯುವ ಪದ್ಧತಿ ರೂಢಿಯಲ್ಲಿದೆ.

 ನಾಗರ ಪಂಚಮಿ ಹಬ್ಬ ಆಚರಣೆಯ ಬಗ್ಗೆ ಕೆಲವು ಮಾಹಿತಿ ನೋಡುವುದಾದರೆ

ನಾಗರ ಪಂಚಮಿಯ ದಿನ ನಾಗ ದೇವತೆಯನ್ನು ಪೂಜಿಸಲಾಗುತ್ತದೆ. ಹೆಣ್ಣುಮಕ್ಕಳು ಹುತ್ತಗಳಿಗೆ ಹಾಲು ತುಪ್ಪ ಎರೆದು ನಾಗ ದೇವತೆ ಎಲ್ಲರಿಗೂ ಒಳಿತು ಮಾಡುವಂತೆ ಪ್ರಾರ್ಥಿಸುತ್ತಾರೆ ಮತ್ತು ಸಹೋದರನ ಒಳಿತಿಗಾಗಿ ಪ್ರಾರ್ಥಿಸುತ್ತಾರೆ. ಇನ್ನು ಪೂಜೆ ಬಳಿಕ ತಾವು ಸಾಗುವ ದಾರಿಯುದ್ದಕ್ಕೂ ಸಕ್ಕರೆ ಅಥವಾ ಸಿಹಿಯಾದ ಅಳ್ಳುಗಳನ್ನೂ ಚೆಲ್ಲುತ್ತಾ ಹೋಗುತ್ತಾರೆ. ಕಾರಣ ಆ ಸಿಹಿಗೆ ಇರುವೆಗಳು ಸೇರಿದಂತೆ ಚಿಕ್ಕ ಕೀಟಗಳಿಗೆ ಆಹಾರ ತಿನ್ನಿಸಿದ ಭಾವನೆ ಬರುತ್ತದೆ ಎಂಬ ನಂಬಿಕೆ. ಅಂದು ಕೆಲ ಹೆಣ್ಣು ಮಕ್ಕಳಿಗೆ ಗಂಡನ ಮನೆಯಿಂದ ತವರು ಮನೆಗೆ ಕರೆದೊಯ್ಯಲು ಸಹೋದರ ಬರುವ ದಾರಿಗಾಗಿ ಕಾಯುವಿಕೆಯ ಬಗ್ಗೆ ನಮ್ಮ ಹಳ್ಳಿಯ ಜಾನಪದರು ತಮ್ಮದೇ ಶೈಲಿಯಲ್ಲಿ ಹಾಡಿ ಹೊಗಳಿದ್ದಾರೆ. ಹಬ್ಬದ ದಿನ ಇಡೀ ಊರಿನ ಮನೆಗಳಲ್ಲಿ ಸಿಹಿ ಊಟ ಮಾಡಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ.

ಪ್ರಾಮುಖ್ಯತೆ

ನಾಗರ ಪಂಚಮಿಯು ಅಣ್ಣ, ತಂಗಿಯರ ಪ್ರೀತಿ ಮತ್ತು ಬಾಂಧವ್ಯವನ್ನು ಸೂಚಿಸುತ್ತದೆ. ನಾಗ ದೇವತೆಯ ಆರಾಧನೆಯಿಂದ ಸರ್ಪಭಯ ನಿವಾರಣೆಯಾಗುತ್ತದೆ ಎಂಬ ನಂಬಿಕೆಯೂ ಇದೆ.

ಆಚರಣೆ ವಿಧಾನ

ಈ ಹಬ್ಬದ ದಿನದಂದು, ನಾಗ ದೇವಸ್ಥಾನಗಳಿಗೆ ಭೇಟಿ ನೀಡಿ, ಹಾಲಿನ ನೈವೇದ್ಯವನ್ನು ಅರ್ಪಿಸಲಾಗುತ್ತದೆ. ಅಲ್ಲದೆ, ಹೆಣ್ಣುಮಕ್ಕಳು ಹೊಸ ಬಟ್ಟೆಗಳನ್ನು ಧರಿಸಿ, ಅಲಂಕಾರ ಮಾಡಿಕೊಂಡು ಸಡಗರ ಸಂಭ್ರಮದ ಜೊತೆಗೆ ಭಕ್ತಿಯಿಂದ ಹಬ್ಬವನ್ನು ಆಚರಿಸುತ್ತಾರೆ. ಜೊತೆಗೆ ಕೆಲವರು ಹಾವು ಹಾಲು ಕುಡಿಯುವುದಿಲ್ಲ ಎಂಬ ವಾದ ಒಂದೆಡೆಯಾದರೆ, ಮತ್ತೊಂದೆಡೆ ನಾಗದೇವತೆಗೆ ಹಾಲು ಎರೆಯುವುದು ಭಕ್ತಿಯ ಪ್ರತೀಕ ಹಾಗೂ ವಿಷದಿಂದ ಕೂಡಿದ ನಾಗರ ಹಾಲು ಕುಡಿದು ವಿಷ ಕಡಿಮೆಯಾಗಲಿ ಎಂಬ ಒಂದು ನಂಬಿಕೆಯಿದೆ ಎನ್ನುತ್ತಾರೆ ಹಿರಿಯರು.

 ಶ್ರಾವಣ ಮಾಸ

ನಾಗರ ಪಂಚಮಿಯು ಶ್ರಾವಣ ಮಾಸದ ಹಬ್ಬಗಳಲ್ಲಿ ಬರುವ ಮೊದಲ ಹಬ್ಬವಾಗಿದೆ . ಈ ಮಾಸದಲ್ಲಿ ಬರುವ ಹಬ್ಬಗಳು ಹಿಂದೂ ಧರ್ಮದಲ್ಲಿ ವಿಶೇಷ ಮಹತ್ವವನ್ನು ಹೊಂದಿವೆ. ಎಲ್ಲಾ ಕಡೆ ಆಚರಿಸುವಂತೆ ನಾಗರ ಪಂಚಮಿಯನ್ನು ಕೋಟೆ ನಾಡು ಚಿತ್ರದುರ್ಗದಲ್ಲಿ ಸಹ ಸಂಪ್ರದಾಯದಂತೆ ವಿಜೃಂಭಣೆಯಿಂದ ಆಚರಿಸಲಾಗುವುದು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
Month nagara of panchami shravana
Follow on Google News Follow on Instagram
Share. Facebook Twitter Telegram WhatsApp
Previous Articleಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರು ಉಡೀಸ್..!
Next Article ವಾಕಿಂಗ್ ಮಾಡುವುದರಿಂದ ಏನೆಲ್ಲ ಪ್ರಯೋಜನ ಗೊತ್ತೆ..?
Times of bayaluseeme
  • Website

Related Posts

ಹೊಸದುರ್ಗ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ಕೊಟ್ಟ ನೂತನ ಜಿ.ಪಂ ಸಿಇಒ

July 29, 2025

ಧರ್ಮಸ್ಥಳ ಕೇಸ್; ಶವ ಹೂತಿಟ್ಟ 13 ಸ್ಥಳಗಳನ್ನು ಗುರುತು ಮಾಡಿದ ಸಾಕ್ಷಿದರ

July 29, 2025

RCB ವಿಜಯೋತ್ಸವದ ವೇಳೆ ಕಾಲ್ತುಳಿತ ಪ್ರಕರಣ; ನಾಲ್ವರು ಅಧಿಕಾರಿಗಳ ಅಮಾನತು ಹಿಂಪಡೆದ ಸರ್ಕಾರ

July 29, 2025
Add A Comment
Leave A Reply Cancel Reply

Advertisement
Latest Posts

ಸರ್ಕಾರದ ಯೋಜನೆಗಳನ್ನು ಕಾರ್ಮಿಕರು ಸದುಪಯೋಗ ಮಾಡಿಕೊಳ್ಳಬೇಕು – ಸಚಿವ ಸಂತೋಷ್ ಲಾಡ್

ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

ಹೊಸದುರ್ಗ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ಕೊಟ್ಟ ನೂತನ ಜಿ.ಪಂ ಸಿಇಒ

ಯೂರಿಯ ಗೊಬ್ಬರಕ್ಕಾಗಿ ಹೊಳಲ್ಕೆರೆ ತಾಲೂಕಿನಲ್ಲಿ ರೈತರ ಪ್ರತಿಭಟನೆ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.