Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ರಸಗೊಬ್ಬರ ಕಾಳಸಂತೆಕೋರರ ವಿರುದ್ದ ಕಠಿಣ ಕ್ರಮ ಕೈಗೊಳ್ಳಿ- ಸಿಎಂ ಸೂಚನೆ

ಎಣ್ಣೆಗೆ ಹಣ ಕೊಡಲಿಲ್ಲ ಎಂದು ಹೆತ್ತವಳನ್ನೇ ಕೊಂದ ಪಾಪಿ ಮಗ

ಪುನೀತ್ ರಾಜಕುಮಾರ್ ಪ್ರೀತಿಯ ಸೋದರತ್ತೆ ನಾಗಮ್ಮ ನಿಧನ 

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ನಮ್ಮ ಚಿತ್ರದುರ್ಗ»ಕನ್ನಡವನ್ನು ನಿರ್ಲಕ್ಷಿಸುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಿ – ಜೆ.ಯಾದವರೆಡ್ಡಿ
ನಮ್ಮ ಚಿತ್ರದುರ್ಗ

ಕನ್ನಡವನ್ನು ನಿರ್ಲಕ್ಷಿಸುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಿ – ಜೆ.ಯಾದವರೆಡ್ಡಿ

Times of bayaluseemeBy Times of bayaluseemeJuly 31, 2025Updated:July 31, 2025No Comments2 Mins Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ಚಿತ್ರದುರ್ಗ : ಕನ್ನಡವನ್ನು ನಿರ್ಲಕ್ಷಿಸುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವಂತೆ ಸರ್ವೋದಯ ಕರ್ನಾಟಕ ಪಕ್ಷದಜಿಲ್ಲಾಧ್ಯಕ್ಷೆ ಜೆ.ಯಾದವರೆಡ್ಡಿ ಸರ್ಕಾರವನ್ನು ಒತ್ತಾಯಿಸಿದರು.ಕರುನಾಡ ವಿಜಯಸೇನೆಯಿಂದ ಪತ್ರಕರ್ತರ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಸರ್ಕಾರದ ಮರಣ ಶಾಸನ, ರಾಜಕಾರಣಿಗಳಲ್ಲಿನ ಇಚ್ಚಾಶಕ್ತಿ ಕೊರತೆ, ಅಧಿಕಾರಿಗಳ ಅಸಡ್ಡೆಯಿಂದ ಕನ್ನಡ ಸೊರಗುತ್ತಿದೆ. ಕರ್ನಾಟಕದಲ್ಲಿ ಕನ್ನಡವೇಸಾರ್ವಭೌಮ ಭಾಷೆಯಾಗಬೇಕೆಂದು ಅನೇಕ ಹೋರಾಟಗಾರರು ಚಿಂತಕರು, ಸಾಹಿತಿಗಳು ಹಿಂದಿನಿಂದಲುಚಳುವಳಿಗಳನ್ನುನಡೆಸಿಕೊಂಡು ಬರುತ್ತಿದ್ದಾರೆ. ಆದರೂ ಕನ್ನಡ ಪೂರ್ಣ ಪ್ರಮಾಣದಲ್ಲಿ ಆಡಳಿತ ಭಾಷೆಯಾಗಿಲ್ಲ. ಇಂಗ್ಲಿಷ್‍ನಲ್ಲಿ ಷರಾ ಬರೆಯುವುದು
ಇನ್ನು ನಿಂತಿಲ್ಲ. ಜನಸಾಮಾನ್ಯರಿಗೆ ಅರ್ಥವಾಗುವ ಕನ್ನಡ ಭಾಷೆಯನ್ನು ಬಳಸಲು ಏನು ಕಷ್ಟ. ದೊಡ್ಡ ದೊಡ್ಡ ದೇಶಗಳಲ್ಲಿ ಮಾತೃಭಾಷೆಯಲ್ಲಿ ಶಿಕ್ಷಣವನ್ನು ನೀಡಲಾಗುತ್ತಿದೆ. ಕರ್ನಾಟಕದಲ್ಲಿ ಅದು ಏಕೆ ಆಗುತ್ತಿಲ್ಲ ಎಂದು ಜೆ.ಯಾದವರೆಡ್ಡಿ ಪ್ರಶ್ನಿಸಿದರು?ಕನ್ನಡ ಭಾಷೆಗೆ ಸುಪ್ರೀಂಕೋರ್ಟ್ ಅಡ್ಡ ಬಂದಿದೆ. ಬೆಂಗಳೂರಿನಲ್ಲಿ ಮೆಟ್ರೋ ಉದ್ಗಾಟನೆಯಲ್ಲಿ ಹಿಂದಿಯನ್ನು ಬಳಸಿ ಕನ್ನಡಕ್ಕೆಅವಮಾನ ಮಾಡಲಾಗಿದೆ. ಕನ್ನಡಪರ ಸಂಘಟನೆಗಳು ಉಗ್ರ ಹೋರಾಟ ಮಾಡಿವೆ. ಇಂಗ್ಲಿಷ್ ಮತ್ತು ಹಿಂದಿ ಭಾಷೆಯನ್ನು ಕನ್ನಡದಮೇಲೆ ಹೇರಲಾಗುತ್ತಿದೆ. ಹೋರಾಟಗಾರರ ಮೇಲೆ ನೂರಾರು ಕೇಸುಗಳು ಬಿದ್ದಿವೆ. ಶ್ರೀಮಂತ ಭಾಷೆ ಕನ್ನಡವನ್ನು ಉಳಿಸಿಬೆಳೆಸಬೇಕಾಗಿದೆ ಎಂದು ಆಗ್ರಹಿಸಿದರು.

ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಾತನಾಡಿ ಅಂಗಡಿ ಮುಂಗಟ್ಟು, ಶಾಲಾ-ಕಾಲೇಜು, ಆಸ್ಪತ್ರೆಗಳಲ್ಲಿ
ಶೇ.60 ರಷ್ಟು ಕನ್ನಡ ನಾಮ ಫಲಕವಿರಬೇಕೆಂದು ಸರ್ಕಾರ ಆದೇಶಿಸಿದ್ದರೂ ಸರಿಯಾಗಿ ಪಾಲನೆಯಾಗುತ್ತಿಲ್ಲ. ಸಾಕಷ್ಟು ಹೋರಾಟಮಾಡಿ ಇಂಗ್ಲಿಷ್ ನಾಮಫಲಕಗಳಿಗೆ ಮಸಿ ಬಳಿದು ಬೋರ್ಡ್‍ಗಳನ್ನು ಕಿತ್ತು ಹಾಕಿದ್ದೇವೆ. ನಮ್ಮ ಪ್ರಾಣ ಹೋದರು ಸರಿಹೋರಾಟದಿಂದ ಮಾತ್ರ ಹಿಂದೆ ಸರಿಯುವುದಿಲ್ಲ. ನಗರಸಭೆಯವರು ಟ್ರೇಡ್ ಲೈಸೆನ್ಸ್ ಕೊಡುವಾಗ ಕಡ್ಡಾಯವಾಗಿ ಕನ್ನಡನಾಮಫಲಕವಾಕಬೇಕೆಂದು ಸೂಚಿಸಬೇಕು. ಇನ್ನು ಎರಡು ತಿಂಗಳು ಗಡುವು ನೀಡುತ್ತೇವೆ. ಇಂಗ್ಲಿಷ್ ಮಯವಾಗಲು ಬಿಡಲ್ಲ.ಎಲ್ಲಾದರೂ ಆಂಗ್ಲ ನಾಮ ಫಲಕಗಳು ಕಂಡು ಬಂದರೆ ಮಸಿ ಬಳಿಯುವುದಾಗಿ ಎಚ್ಚರಿಸಿದ್ದಾರೆ.
ಲೇಖಕ ಹೆಚ್.ಆನಂದ್‍ಕುಮಾರ್ ಮಾತನಾಡಿ ಕನ್ನಡ ಪರ ಹೋರಾಟಗಾರರ ಮೇಲೆ ಹಾಕಿರುವ ಕೇಸ್‍ಗಳನ್ನು ರಾಜ್ಯ ಸರ್ಕಾರಹಿಂದಕ್ಕೆ ಪಡೆಯಬೇಕು. ಕನ್ನಡಪರ, ದಲಿತರ ಪರ, ಅಹಿಂದಾ ಪರವಾಗಿದ್ದೇನೆಂದು ಹೇಳುವ ರಾಜ್ಯದ ಮುಖ್ಯಮಂತ್ರಿಸಿದ್ದರಾಮಯ್ಯನವರು ನುಡಿದಂತೆ ನಡೆದುಕೊಳ್ಳುತ್ತಿಲ್ಲ. ಕನ್ನಡದ ಧ್ವನಿ, ಅಸ್ಮಿತೆಗೆ ಧಕ್ಕೆ ಬಂದಾಗ ಬೀದಿಗಿಳಿಯುವ ಹೋರಾಟಗಾರರಮೇಲೆ ಕೇಸ್ ಹಾಕುವುದು, ಗಡಿಪಾರು ಮಾಡುವುದನ್ನು ಸರ್ಕಾರ ಕೈಬಿಡಬೇಕೆಂದು ಮನವಿ ಮಾಡಿದರು.

ಐತಿಹಾಸಿಕ ಚಿತ್ರದುರ್ಗದ ಕೋಟೆಯಲ್ಲಿ ಸರ್ಕಾರದಿಂದಲೆ ಗೈಡ್‍ಗಳ ನೇಮಕವಾಗಬೇಕು. ಇದರಿಂದ ಹೊರಗಿನಿಂದ ಬರುವ
ಪ್ರವಾಸಿಗರಿಗೆ ಕೋಟೆಯ ಬಗ್ಗೆ ಮಾಹಿತಿ ನೀಡಲು ಸುಲಭವಾಗುತ್ತದೆ. ಯಾವುದೇ ಕಾರಣಕ್ಕೂ ಸರ್ಕಾರ ಹೋರಾಟಗಾರರನ್ನು
ತಿರಸ್ಕರಿಸಬಾರದೆಂದು ಹೇಳಿದರು.ಕರುನಾಡ ವಿಜಯಸೇನೆ ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ರಾಜ್ಯ ಸಮಿತಿ ಸದಸ್ಯನಿಸಾರ್ ಅಹಮದ್, ನಗರಾಧ್ಯಕ್ಷಅವಿನಾಶ್, ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
action g YADAVA REDDY Kannada NECCESSRAY Negligence Take Towards
Follow on Google News Follow on Instagram
Share. Facebook Twitter Telegram WhatsApp
Previous Articleಹಿಂದೂ ಮಹಾಗಣಪತಿ ಮಂಟಪಕ್ಕೆ ಭೂಮಿ ಪೂಜೆ ನೆರವೇರಿಸಿದ ಅಧ್ಯಕ್ಷ ಶರಣ್ ಕುಮಾರ್
Next Article 68ನೇ ವರ್ಷದ ಪ್ರಸನ್ನ ಗಣಪತಿ ಉತ್ಸವಕ್ಕೆ ಧ್ವಜ ಪೂಜೆ ನೆರವೇರಿಸಿದ ಪ್ರಸನ್ನ ಗಣಪತಿ ಸೇವಾ ಸಮಿತಿ ಸದಸ್ಯರು
Times of bayaluseeme
  • Website

Related Posts

ರಸಗೊಬ್ಬರ ಕಾಳಸಂತೆಕೋರರ ವಿರುದ್ದ ಕಠಿಣ ಕ್ರಮ ಕೈಗೊಳ್ಳಿ- ಸಿಎಂ ಸೂಚನೆ

August 1, 2025

ಆಗಸ್ಟ್ 01ನ್ನು ರಾಜ್ಯ ಸರ್ಕಾರವು ರಾಜ್ಯಾದ್ಯಂತ ವ್ಯಸನ ಮುಕ್ತ ದಿನವನ್ನಾಗಿ ಆಚರಿಸಲು ಕಾರಣ ಯಾರು ಗೊತ್ತೆ…?

August 1, 2025

ಚಿತ್ರದುರ್ಗ ನೂತನ ಜಿಲ್ಲಾಧಿಕಾರಿ ಕಟ್ಟಡವನ್ನು ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸುವಂತೆ ಸಿಎಂ ನಿರ್ದೇಶನ..!

July 31, 2025
Add A Comment
Leave A Reply Cancel Reply

Advertisement
Latest Posts

ರಸಗೊಬ್ಬರ ಕಾಳಸಂತೆಕೋರರ ವಿರುದ್ದ ಕಠಿಣ ಕ್ರಮ ಕೈಗೊಳ್ಳಿ- ಸಿಎಂ ಸೂಚನೆ

ಎಣ್ಣೆಗೆ ಹಣ ಕೊಡಲಿಲ್ಲ ಎಂದು ಹೆತ್ತವಳನ್ನೇ ಕೊಂದ ಪಾಪಿ ಮಗ

ಪುನೀತ್ ರಾಜಕುಮಾರ್ ಪ್ರೀತಿಯ ಸೋದರತ್ತೆ ನಾಗಮ್ಮ ನಿಧನ 

ಪ್ರಜ್ವಲ್ ರೇವಣ್ಣ ರೇಪ್ ಕೇಸ್; ಪ್ರಜ್ವಲ್‌ ದೋಷಿ ಎಂದು ತೀರ್ಪು ನೀಡಿದ ನ್ಯಾಯಾಲಯ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.