ನ್ಯೂಯಾರ್ಕ್: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ವಿಶ್ವಸಂಸ್ಥೆಯ ಗೊತ್ತುಪಡಿಸಿದ ಭಯೋತ್ಪಾದಕರ ಪಟ್ಟಿಯು ಕೇವಲ ಒಂದು ದೇಶದ ಪ್ರಜೆಗಳಿಂದ ತುಂಬಿದೆ. ಭಾರತದ ಪಕ್ಕದಲ್ಲೇ ಇರುವ ಆ ದೇಶ ಜಾಗತಿಕ ಭಯೋತ್ಪಾದನೆಯ ಕೇಂದ್ರಬಿಂದುವಾಗಿದೆ ಎನ್ನುವ ಮೂಲಕ ಪಾಕಿಸ್ತಾನದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಪಾಕಿಸ್ತಾನವು ಭಯೋತ್ಪಾದನೆಯನ್ನು ತನ್ನ ರಾಜ್ಯ ನೀತಿ ಎಂದು ಬಹಿರಂಗವಾಗಿ ಘೋಷಿಸಿದೆ. ಅದು “ಜಾಗತಿಕ ಭಯೋತ್ಪಾದನೆಯ ಕೇಂದ್ರಬಿಂದು” ವಾಗಿ ಮುಂದುವರೆದಿದೆ ಎಂದ ಸಚಿವ ಜೈಶಂಕರ್, 26 ಅಮಾಯಕ ಪ್ರವಾಸಿಗರನ್ನು ಗುಂಡಿಕ್ಕಿ ಕೊಂದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಸಹ ಪ್ರಸ್ತಾಪಿಸಿದರು. ಇದಕ್ಕಾಗಿ ಭಾರತವು ಭಯೋತ್ಪಾದನೆಯ ವಿರುದ್ಧ ತನ್ನ ಜನರನ್ನು ರಕ್ಷಿಸುವ ಸಲುವಾಗಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ಮೂಲಕ ನೆರೆಯ ದೇಶದೊಳಗೆ ಅಡಗಿದ್ದ ಉಗ್ರರನ್ನು ಮಟ್ಟ ಹಾಕಲಾಯಿತು. ಇದರಿಂದ ಪಾಕಿಸ್ತಾನ ಉಗ್ರರಿಗೆ ಆಶ್ರಯ ನೀಡುತ್ತಿರುವುದು ಕೂಡ ಜಗತ್ತಿನ ಮುಂದೆ ಮತ್ತೊಮ್ಮೆ ಬಯಲಾಯಿತು ಎಂದಿದ್ದಾರೆ.“ಭಾರತವು ಸ್ವಾತಂತ್ರ್ಯದ ನಂತರದಿಂದಲೂ ಈ ಸವಾಲನ್ನು ಎದುರಿಸಿದೆ. ನಮ್ಮ ದೇಶ ಜಾಗತಿಕ ಭಯೋತ್ಪಾದನೆಯ ಕೇಂದ್ರಬಿಂದುವಾಗಿರುವ ನೆರೆಯ ರಾಷ್ಟ್ರವನ್ನು ಹೊಂದಿದೆ. ದಶಕಗಳಿಂದ ಪ್ರಮುಖ ಅಂತರರಾಷ್ಟ್ರೀಯ ಭಯೋತ್ಪಾದಕ ದಾಳಿಗಳು ಆ ಒಂದು ದೇಶದಲ್ಲಿರುವ ಉಗ್ರರಿಂದ ನಡೆಯುತ್ತಿವೆ. ವಿಶ್ವಸಂಸ್ಥೆಯ ಗೊತ್ತುಪಡಿಸಿದ ಭಯೋತ್ಪಾದಕರ ಪಟ್ಟಿಗಳು ಆ ದೇಶದ ಪ್ರಜೆಗಳಿಂದ ತುಂಬಿವೆ. ಆ ದೇಶ ಪಾಕಿಸ್ತಾನ. ಪಾಕಿಸ್ತಾನದಂತಹ ಒಂದು ದೇಶ ಭಯೋತ್ಪಾದನೆಯನ್ನು ರಾಜ್ಯ ನೀತಿ ಎಂದು ಬಹಿರಂಗವಾಗಿ ಘೋಷಿಸಿದಾಗ, ಭಯೋತ್ಪಾದಕ ಕೇಂದ್ರಗಳು ಕೈಗಾರಿಕಾ ಪ್ರಮಾಣದಲ್ಲಿ ಕಾರ್ಯನಿರ್ವಹಿಸಿದಾಗ, ಭಯೋತ್ಪಾದಕರನ್ನು ಸಾರ್ವಜನಿಕವಾಗಿ ವೈಭವೀಕರಿಸಿದಾಗ, ಅಂತಹ ಕ್ರಮಗಳನ್ನು ನಿಸ್ಸಂದಿಗ್ಧವಾಗಿ ಖಂಡಿಸಬೇಕು. ಭಯೋತ್ಪಾದನೆಗೆ ಹಣಕಾಸು ಒದಗಿಸುವುದನ್ನು ಹತ್ತಿಕ್ಕಬೇಕು ಎಂದು ಸಚಿವ ಜೈಶಂಕರ್ ಪಾಕಿಸ್ತಾನದ ಬೆವರಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







