ಪಾನಿಪೂರಿಗೂ ‘ಗ್ಯಾಸ್’ ಟ್ರಬಲ್; ವ್ಯಾಪಾರ ಬಂದ್
ಚಿತ್ರದುರ್ಗ: ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ದೊಡ್ಡ ಉದ್ಯಮಗಳು ಸೇರಿದಂತೆ ಬೀದಿಬದಿಯ ವ್ಯಾಪಾರಿಗಳಿಗೂ ಸಮಸ್ಯೆ ಎದುರಾಗಿದೆ. ಅದರಂತೆ ಪಾನಿಪೂರಿ ವ್ಯಾಪಾರಕ್ಕೂ ಗ್ಯಾಸ್ ಸಿಲಿಂಡರ್ ಬಿಸಿ ತಟ್ಟಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಾನಿಪೂರಿ ವ್ಯಾಪಾರಕ್ಕೂ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಟ್ರಬಲ್ ಶುರುವಾಗಿದೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ಗಳು ಸಿಗದೇ ನಾಲ್ಕೈದು ದಿನಗಳಿಂದ ಪಾನಿಪೂರಿ ವ್ಯಾಪಾರಸ್ಥರು ತಮ್ಮ ಗಾಡಿಗಳನ್ನು ಬಂದ್ ಮಾಡಿದ್ದಾರೆ.
ಖಾಲಿ ಗ್ಯಾಸ್ ಸಿಲಿಂಡರ್ಗಳನ್ನು ಹಿಡಿದು ಎಜೆನ್ಸಿಗಳಿಗೆ ಹೋದರೂ ಗ್ಯಾಸ್ ಸಿಗುತ್ತಿಲ್ಲ. ಇನ್ನೂ ಕಾಳಸಂತೆಯಲ್ಲಿ ನಾಲ್ಕೈದು ಸಾವಿರ ರೂ. ನೀಡಿದ್ರೂ ಕೂಡ ಗ್ಯಾಸ್ ಸಿಗುತ್ತಿಲ್ಲ. ಹೀಗಾಗಿ ಪ್ರತಿದಿನ 2 ಸಾವಿರದಿಂದ 3 ಸಾವಿರ ರೂ. ದುಡಿದು ಜೀವನ ಮಾಡುತ್ತಿದ್ದ ಪಾನಿಪೂರಿ ವ್ಯಾಪಾರಸ್ಥರು ಎಲ್ಪಿಸಿ ಸಿಲಿಂಡರ್ ಸಿಗದೇ ವ್ಯಾಪಾರ ಬಂದ್ ಮಾಡಿದ್ದಾರೆ.
ಪಾನಿಪೂರಿ ವ್ಯಾಪಾರಕ್ಕೆ ಗ್ಯಾಸ್ ಬಿಸಿ ತಟ್ಟಿ ವ್ಯಾಪಾರ ಬಂದ್ ಮಾಡಲಾಗಿದೆ. ಗ್ಯಾಸ್ಗಾಗಿ ಅಲೆದು ಅಲೆದು ಸುಸ್ತಾಗಿದ್ದು, ಕಾಳಸಂತೆಯಲ್ಲಿ ನಾಲ್ಕೈದು ಸಾವಿರ ರೂ.ಗೆ ಗ್ಯಾಸ್ ಪಡೆದು ಲಾಭ ಗಳಿಸೋಕೆ ಸಾಧ್ಯವಿಲ್ಲ. ಹೀಗಾದ್ರೆ ಜೀವನ ನಡೆಸೋದು ಹೇಗೆ ಎನ್ನುತ್ತಾರೆ ಪಾನಿಪೂರಿ ವ್ಯಾಪಾರಸ್ಥರು.
