Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಎರಡು ದಿನ ದೆಹಲಿಗೆ ಹೊರಟ ಸಿಎಂ ಸಿದ್ದರಾಮಯ್ಯ; ಕ್ರಾಂತಿಯ ಮುನ್ಸೂಚನೆಯೇ…!?

ನಿವೇಶನ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ಪ್ರತಿಭಟನೆ

ರಾಜ್ಯದಲ್ಲಿ ರೈತ ವಿರೋಧಿ ಸರ್ಕಾರ ಇದೆ – ಡಾ.ವಿನಯ ಕುಮಾರ್

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ನಮ್ಮ ಚಿತ್ರದುರ್ಗ»ನಿವೇಶನ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ಪ್ರತಿಭಟನೆ
ನಮ್ಮ ಚಿತ್ರದುರ್ಗ

ನಿವೇಶನ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ಪ್ರತಿಭಟನೆ

Times of bayaluseemeBy Times of bayaluseemeJuly 29, 2025No Comments2 Mins Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ಚಿತ್ರದುರ್ಗ : ನಿವೇಶನ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ಭಾರತ ಕಮ್ಯುನಿಸ್ಟ್ ಪಕ್ಷದ ಸಹಯೋಗದೊಂದಿಗೆ ನಿವೇಶನಮತ್ತು ವಸತಿ ರಹಿತರ ಹೋರಾಟ ಸಮಿತಿಯಿಂದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆಮನವಿ ಸಲ್ಲಿಸಲಾಯಿತು.ದಾವಣಗೆರೆ ರಸ್ತೆಯಲ್ಲಿರುವ ಯೂನಿಯನ್ ಪಾರ್ಕ್‍ನಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದವಿರುದ್ದ ಧಿಕ್ಕಾರಗಳನ್ನು ಕೂಗಿದರು.ಭಾರತ ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಸಾತಿಸುಂದರೇಶ್ ಮಾತನಾಡಿ ಜಿಲ್ಲೆಯಲ್ಲಿ ಐವತ್ತು ಸಾವಿರ ಕುಟುಂಬಗಳಿಗೆ ನಿವೇಶನವಿಲ್ಲ. ಎಲ್ಲೆಲ್ಲಿ ಸರ್ಕಾರಿ ಭೂಮಿ ಇದೆಯೋ ಅದನ್ನುಬಡವರ ವಸತಿಗಾಗಿ ಮೀಸಲಿಡಬೇಕು. ರಾಜ್ಯದಲ್ಲಿ ಹದಿನೇಳು ಲಕ್ಷ ಎಕರೆ ಗೋಮಾಳ ಜಮೀನಿದೆ. ಹನ್ನೊಂದು ಲಕ್ಷ ಎಕರೆಒತ್ತುವರಿಯಾಗಿದ್ದು, ಶ್ರೀಮಂತರ ವಶದಲ್ಲಿದೆ. ಕಮ್ಯನಿಸ್ಟ್ ಪಕ್ಷ ಬಡವರ ಪರವಾಗಿದೆ. ನಿವೇಶನ, ಮನೆಗಾಗಿಹೋರಾಡಬೇಕಾಗಿರುವುದರಿಂದ ಎಲ್ಲರೂ ಒಗ್ಗಟ್ಟಾಗಿ ಎಂದು ಮನವಿ ಮಾಡಿದರು.

ಆಳುವ ಸರ್ಕಾರಗಳು ಬಡವರ ಪರವಾಗಿಲ್ಲ. 2000ರಲ್ಲಿ ರಾಜೀವ್‍ಗಾಂಧಿ ವಸತಿ ನಿಗಮ ಸ್ಥಾಪನೆಯಾಯಿತು. ಅಂದಿನಿಂದ
ನಿವೇಶನ ರಹಿತರಿಗೆ ಮನೆಗಳನ್ನು ಕಟ್ಟಿಸಿಕೊಡುವ ಕೆಲಸ ಮಾಡುತ್ತಿದೆ. ನಿವೇಶನಕ್ಕಾಗಿ ಅರ್ಜಿ ಕೊಟ್ಟಿದ್ದೇವೆ. ಇನ್ನು ಕೊಡುತ್ತೇವೆ.ನಿಗಮದ ವೆಬ್‍ಸೈಟ್ ಕಂಪ್ಯುಟರ್‍ನಲ್ಲಿ ಮೊದಲು ನಿವೇಶನ ರಹಿತರ ಹೆಸರುಗಳನ್ನು ಸೇರಿಸಬೇಕು. ಸರ್ಕಾರದಿಂದ ಜಮೀನುಕೇಳೋಣ. ಅಲ್ಲಿಯವರೆಗೂ ತಾಳ್ಮೆಯಿಂದ ಕಾಯಬೇಕೆಂದು ನಿವೇಶನ ಮತ್ತು ವಸತಿ ರಹಿತರನ್ನು ಜಾಗೃತಿಗೊಳಿಸಿದರು.ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಕಾಂ.ಜಿ.ಸಿ.ಸುರೇಶ್‍ಬಾಬು ಮಾತನಾಡಿ ಜಿಲ್ಲೆಯಲ್ಲಿ ಒಂದು ಲಕ್ಷ 26ಸಾವಿರ ನಿವೇಶನರಹಿತರಿದ್ದಾರೆ. ತೆಲಂಗಾಣದಲ್ಲಿ ವಸತಿ ರಹಿತರಿಗೆ ಮನೆಗಳನ್ನು ಕಟ್ಟಿಸಿಕೊಳ್ಳಲು ಐದು ಲಕ್ಷ ರೂ.ಗಳನ್ನುನೀಡುತ್ತಿದೆ. ಕೇರಳದಲ್ಲಿ ಆರುವರೆ ಲಕ್ಷ ರೂ.ಗಳನ್ನು ಕೊಡುತ್ತಿದೆ. ನಮ್ಮ ರಾಜ್ಯದಲ್ಲಿ ಒಂದುವರೆ ಲಕ್ಷ ರೂ.ಗಳು ನೀಡುತ್ತಿರುವುದುಯಾವುದಕ್ಕೂ ಸಾಕಾಗುವುದಿಲ್ಲ. ಅದಕ್ಕಾಗಿ ಐದು ಲಕ್ಷ ರೂ.ಗಳನ್ನು ನೀಡಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಸರ್ಕಾರಿ ಭೂಮಿಯನ್ನು ಕಾಯ್ದಿರಿಸಿ ವಸತಿ ರಹಿತರಿಗೆ ಹಂಚಿ ಮನೆಗಳನ್ನುಕಟ್ಟಿಸಿಕೊಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲ್ಲಾ ವಸತಿ ರಹಿತರನ್ನು ಗುರುತಿಸಿ ವಸತಿ ವ್ಯವಸ್ಥೆ ಕಲ್ಪಿಸುವಂತೆವಿನಂತಿಸಿದರು.

ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಂ.ಟಿ.ಆರ್.ಉಮಾಪತಿ, ತಾಲ್ಲೂಕು ಅಧ್ಯಕ್ಷಡಾ.ಜಿ.ಹೆಚ್.ಹನುಮಂತಪ್ಪ, ತಾಲ್ಲೂಕು ಕಾರ್ಯದರ್ಶಿ ಕಾಂ.ಈ.ಸತ್ಯಕೀರ್ತಿ, ಕಾಂ.ಬಿ.ಬಸವರಾಜು, ಕಾಂ.ಸಿ.ವೈ.ಶಿವರುದ್ರಪ್ಪ,ಕಾಂ.ಎಂ.ಬಿ.ಜಯದೇವಮೂರ್ತಿ, ಕಾಂ.ಎಸ್.ಬಾಬು, ಕಾಂ.ಶ್ರೀಧರ್‍ಯಾದವ್, ಕಾಂ.ಜಾಫರ್ಷರೀಫ್, ಕಾಂ.ಡಿ.ಪೆನ್ನಯ್ಯ, ಕಾಂ. ಮಾರಣ್ಣ,ಕಾಂ.ಎನ್.ಸಿ.ಕುಮಾರಸ್ವಾಮಿ,ಕಾಂ.ಹೆಚ್.ಕೆ.ಸುನಿತಮ್ಮ,ಕಾಂ.ಹೆಚ್.ಎಸ್.ರೇಣುಕಮ್ಮ, ಕಾಂ.ಎಸ್.ಸಿ.ಕುಮಾರ್, ಕಾಂ.ಕೆಂಚಮ್ಮಕಾಂ.ಶಾಜಿಯ, ಕಾಂ.ಅಮೀನಾಭಿ, ಕಾಂ.ಮಹೇಶ್ವರಿ, ಕಾಂ.ಗಂಗಮ್ಮ, ಕಾಂ.ರಾಮಕೃಷ್ಣ, ಕಾಂ.ಶಶಿಧರ ಸೇರಿದಂತೆ ನೂರಾರುನಿವೇಶನ ಮತ್ತು ವಸತಿ ರಹಿತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
against Facility home protest stay
Follow on Google News Follow on Instagram
Share. Facebook Twitter Telegram WhatsApp
Previous Articleರಾಜ್ಯದಲ್ಲಿ ರೈತ ವಿರೋಧಿ ಸರ್ಕಾರ ಇದೆ – ಡಾ.ವಿನಯ ಕುಮಾರ್
Next Article ಎರಡು ದಿನ ದೆಹಲಿಗೆ ಹೊರಟ ಸಿಎಂ ಸಿದ್ದರಾಮಯ್ಯ; ಕ್ರಾಂತಿಯ ಮುನ್ಸೂಚನೆಯೇ…!?
Times of bayaluseeme
  • Website

Related Posts

ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

July 29, 2025

ಹೊಸದುರ್ಗ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ಕೊಟ್ಟ ನೂತನ ಜಿ.ಪಂ ಸಿಇಒ

July 29, 2025

ಯೂರಿಯ ಗೊಬ್ಬರಕ್ಕಾಗಿ ಹೊಳಲ್ಕೆರೆ ತಾಲೂಕಿನಲ್ಲಿ ರೈತರ ಪ್ರತಿಭಟನೆ

July 29, 2025
Add A Comment
Leave A Reply Cancel Reply

Advertisement
Latest Posts

ಎರಡು ದಿನ ದೆಹಲಿಗೆ ಹೊರಟ ಸಿಎಂ ಸಿದ್ದರಾಮಯ್ಯ; ಕ್ರಾಂತಿಯ ಮುನ್ಸೂಚನೆಯೇ…!?

ನಿವೇಶನ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ಪ್ರತಿಭಟನೆ

ರಾಜ್ಯದಲ್ಲಿ ರೈತ ವಿರೋಧಿ ಸರ್ಕಾರ ಇದೆ – ಡಾ.ವಿನಯ ಕುಮಾರ್

ಸರ್ಕಾರದ ಯೋಜನೆಗಳನ್ನು ಕಾರ್ಮಿಕರು ಸದುಪಯೋಗ ಮಾಡಿಕೊಳ್ಳಬೇಕು – ಸಚಿವ ಸಂತೋಷ್ ಲಾಡ್

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.