Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಆಗಸ್ಟ್ 01ನ್ನು ರಾಜ್ಯ ಸರ್ಕಾರವು ರಾಜ್ಯಾದ್ಯಂತ ವ್ಯಸನ ಮುಕ್ತ ದಿನವನ್ನಾಗಿ ಆಚರಿಸಲು ಕಾರಣ ಯಾರು ಗೊತ್ತೆ…?

ಚಿತ್ರದುರ್ಗ ನೂತನ ಜಿಲ್ಲಾಧಿಕಾರಿ ಕಟ್ಟಡವನ್ನು ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸುವಂತೆ ಸಿಎಂ ನಿರ್ದೇಶನ..!

ಕ್ಷುಲ್ಲಕ ಕಾರಣಕ್ಕೆ ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯ ತಡೆಯುವಂತೆ ಡಿಸಿಗೆ ಮಾದಿಗ ಮಹಾಸಭಾ ದೂರು

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ಪ್ರಮುಖ ಸುದ್ದಿ»“ದಿ ರಾಮೇಶ್ವರಂ ಕೆಫೆ” ವತಿಯಿಂದ ಉತ್ತರ ಭಾರತದ ಶೈಲಿಯ “ತೀರ್ಥ” ಕೆಫೆ ಆರಂಭ
ಪ್ರಮುಖ ಸುದ್ದಿ

“ದಿ ರಾಮೇಶ್ವರಂ ಕೆಫೆ” ವತಿಯಿಂದ ಉತ್ತರ ಭಾರತದ ಶೈಲಿಯ “ತೀರ್ಥ” ಕೆಫೆ ಆರಂಭ

Times of bayaluseemeBy Times of bayaluseemeJuly 31, 2025No Comments2 Mins Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ಬೆಂಗಳೂರು: ದಕ್ಷಿಣ ಭಾರತ ಪಾಕ ಪದ್ಧತಿಗೆ ಹೆಸರುವಾಸಿಯಾಗಿರುವ ದಿ ರಾಮೇಶ್ವರಂ ಕೆಫೆ ಇದೀಗ ಉತ್ತರ ಭಾರತದ ಶೈಲಿ ಆಹಾರಪದ್ಧತಿ ಪರಿಚಯಿಸುತ್ತಿದ್ದು, ಕನ್ನಿಂಗ್‌ಹ್ಯಾಮ್‌ ರಸ್ತೆಯಲ್ಲಿ ನೂತನವಾಗಿ “ತೀರ್ಥ” ಶೀರ್ಷಿಕೆಯ ಶಾಖೆ ತೆರೆದಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಮೇಶ್ವರಂ ಕೆಫೆ”ಯ ಸಹ-ಸಂಸ್ಥಾಪಕ , ಸಿಇಒ ರಾಘವೇಂದ್ರ ರಾವ್, ದಕ್ಷಿಣ ಭಾರತದ ಸಾಂಪ್ರದಾಯಿಕ ಭೋಜನವನ್ನು ಜನಸಾಮಾನ್ಯರಿಗೆ ಉಣಬಡಿಸಿದ ಬಳಿಕ ಉತ್ತರ ಭಾರತದ ಆಹಾರಪದ್ಧತಿಯನ್ನೂ ಸಹ ಜನರಿಗೆ ಪರಿಚಯಿಸಬೇಕೆಂಬ ಆಶಯದಡಿ ನೂತನವಾಗಿ ಮೊದಲ “ತೀರ್ಥ” ಶೀರ್ಷಿಕೆಯಡಿ ಶಾಖೆ ತೆರೆಯಲಾಗಿದ್ದು, ಆಗಸ್ಟ್‌ ೧ ರಿಂದ ಜನಸಾಮಾನ್ಯರಿಗೆ ಲಭ್ಯವಿರಲಿದೆ. ಈ ಶಾಖೆಯನ್ನು ನಟ ಶಿವರಾಜ್‌ಕುಮಾರ್‌ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಜು.31ರಂದು ಚಾಲನೆ ನೀಡಲಿದ್ದಾರೆ ಎಂದರು.

ದಿ ರಾಮೇಶ್ವರಂ ಕೆಫೆ ಸಹ-ಸಂಸ್ಥಾಪಕಿ ಮತ್ತು ವ್ಯವಸ್ಥಾಪಕ ನಿರ್ದೇಶಕಿ ದಿವ್ಯಾ ರಾಘವೇಂದ್ರ ರಾವ್ ಮಾತನಾಡಿ, “ ರಾಮೇಶ್ವರಂ ಕೆಫೆ ಪ್ರಾರಂಭದ ಸಂದರ್ಭದಲ್ಲಿ ಇದ್ದ ಉತ್ಸಾಹದಿಂದಲೇ ತೀರ್ಥ ವನ್ನು ಪ್ರಾರಂಭಿಸಿದ್ದೇವೆ.ಆಧುನಿಕ ವಿನ್ಯಾಸದೊಂದಿಗೆ ನಮ್ಮ ಸಂಪ್ರದಾಯವನ್ನು ಗೌರವಿಸುವ ನಿಟ್ಟಿನಲ್ಲಿ ದೇವಸ್ಥಾನದ ಅನುಭವ ನೀಡುವ ವಿನ್ಯಾಸಕ್ಕೆ ಆದ್ಯತೆ ನೀಡಲಾಗಿದೆ. ಸುಮಾರು 150 ಜನರು ಕೂರಬಹುದಾದ ವಿಶಾಲ ಸ್ಥಳವನ್ನು ಹೊಂದಿದೆ, ಮುಂದಿನ ದಿನಗಳಲ್ಲಿ ತೀರ್ಥ ವನ್ನು ನಗರಾಧ್ಯಂತ ತೆರೆಯಲು ತಯಾರಿ ನಡೆಸುತ್ತಿದ್ದು, ಹಿಂದೂಸ್ತಾನಿ ಪಾಕಶಾಲೆಯ ತತ್ವಶಾಸ್ತ್ರವನ್ನು ದಕ್ಷಿಣ ಭಾರತದ ಪೂರ್ವವರ್ತಿಯಂತೆ ವಿಸ್ತರಿಸಲಾಗುತ್ತದೆ ಎಂದರು.ಇನ್ನುಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಕೀಟ ಸಿಕ್ಕಿರುವ ಕುರಿತು ಪ್ರತಿಕ್ರಿಸಿದ ದಿವ್ಯಾ, ಈಗಾಗಲೇ ಈ ವಿಚಾರದ ಬಗ್ಗೆ ದೂರು ದಾಖಲಿಸಿದ್ದೇವೆ. ಈ ಘಟನೆ ನಡೆದ ಕೂಡಲೇ ಏರ್‌ಪೋರ್ಟ್‌ನಲ್ಲಿರುವ ಎಫ್‌ಎಸ್‌ಎಸ್‌ಐ ತಂಡ ಆಗಮಿಸಿ, ಸಂಪೂರ್ಣ ತಪಾಸಣೆ ನಡೆಸಿದರು, ಆ ಕೀಟವನ್ನು ಪರಿಶೀಲಿಸಿದದಾರೆ, ಅವರು ಸ್ಪಷ್ಟನೆ ನೀಡುತ್ತಿರುವ ಪ್ರಕಾರ, ಆ ರೀತಿಯ ಕೀಟ ಏರ್‌ಪೋರ್ಟ್‌ನಲ್ಲಿಯೇ ಇಲ್ಲ ಎಂದು ಹೇಳುತ್ತಿದ್ದಾರೆ. ಹಾಗಿದ್ದರೆ, ನಮ್ಮ ಕೆಫೆಯಲ್ಲಿ ಹೇಗೆ ಸಿಗಲು ಸಾಧ್ಯ? ಹೀಗಾಗಿ ಇದರ ಬಗ್ಗೆ ಸೂಕ್ತ ತನಿಖೆಯಾಗುವಂತೆಯೂ ಒತ್ತಾಯಿಸಿದ್ದೇವೆ ಎಂದು ಹೇಳಿದರು. ನಮ್ಮ ತಪ್ಪಿದ್ದರೆ ಖಂಡಿತ ತಲೆ ಬಾಗುತ್ತೇವೆ, ಗ್ರಾಹಕರು ನಮಗೆ ದೇವರಿದ್ದಂತೆ, ಅವರಿಗೆ ಯಾವುದೇ ಅನಾನುಕೂಲತೆ ಆಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ, ಆದರೆ ನಮ್ಮ ತಪ್ಪಿಲ್ಲವೆಂದಾಗ ಸುಮ್ಮನಿರಲಾಗುವುದಿಲ್ಲ, ಸೂಕ್ತ ತನಿಖೆ ಬಳಿಕ ಸತ್ಯ ಹೊರಬರಲಿದೆ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
cafe north india Raameshvaram Special started Thirtha cafe
Follow on Google News Follow on Instagram
Share. Facebook Twitter Telegram WhatsApp
Previous Articleಲಾಭಕ್ಕಾಗಿ ಅತ್ಯಂತ ದುರ್ಬಲರನ್ನು ಬಳಸಿಕೊಳ್ಳುವುದು ಭಯಾನಕ ಅಪರಾಧ
Next Article ರಾಹುಲ್ ಗಾಂಧಿಗೆ ಕಾಮನ್ಸೆನ್ಸ್ ಇಲ್ಲದೆ ಮಾತಾಡ್ತಾರೆ – ಆರ್.ಅಶೋಕ್ ಕಿಡಿ
Times of bayaluseeme
  • Website

Related Posts

ರಾಹುಲ್ ಗಾಂಧಿಗೆ ಕಾಮನ್ಸೆನ್ಸ್ ಇಲ್ಲದೆ ಮಾತಾಡ್ತಾರೆ – ಆರ್.ಅಶೋಕ್ ಕಿಡಿ

July 31, 2025

ಲಾಭಕ್ಕಾಗಿ ಅತ್ಯಂತ ದುರ್ಬಲರನ್ನು ಬಳಸಿಕೊಳ್ಳುವುದು ಭಯಾನಕ ಅಪರಾಧ

July 31, 2025

ತೆಲುಗು ಚಿತ್ರರಂಗದತ್ತ ಮುಖ ಮಾಡಿದ ನಟ ರಿಷಬ್ ಶೆಟ್ಟಿ

July 31, 2025
Add A Comment
Leave A Reply Cancel Reply

Advertisement
Latest Posts

ಆಗಸ್ಟ್ 01ನ್ನು ರಾಜ್ಯ ಸರ್ಕಾರವು ರಾಜ್ಯಾದ್ಯಂತ ವ್ಯಸನ ಮುಕ್ತ ದಿನವನ್ನಾಗಿ ಆಚರಿಸಲು ಕಾರಣ ಯಾರು ಗೊತ್ತೆ…?

ಚಿತ್ರದುರ್ಗ ನೂತನ ಜಿಲ್ಲಾಧಿಕಾರಿ ಕಟ್ಟಡವನ್ನು ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸುವಂತೆ ಸಿಎಂ ನಿರ್ದೇಶನ..!

ಕ್ಷುಲ್ಲಕ ಕಾರಣಕ್ಕೆ ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯ ತಡೆಯುವಂತೆ ಡಿಸಿಗೆ ಮಾದಿಗ ಮಹಾಸಭಾ ದೂರು

ಆಂಜನೇಯರನ್ನು ತೇಜೋವಧೆ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ದೂರು ನೀಡದ ಮಾದಿಗ ಜಾಗೃತಿ ವೇದಿಕೆ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.