Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಅಮ್ಮನೆಂಬ ಆರಾಧನೆ ಮತ್ತು ಆಕೆಯ ಒಳಗಿನ ಮನುಷ್ಯತ್ವ: ಒಂದು ಆತ್ಮಾವಲೋಕನ

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಮುಖಪುಟ»ಮೀಸಲಾತಿ ವಿಚಾರದಲ್ಲಿ ರಾಜಕಾರಣ ಬೇಡ: ಶಾಸಕ ಟಿ.ರಘುಮೂರ್ತಿ
ಮುಖಪುಟ

ಮೀಸಲಾತಿ ವಿಚಾರದಲ್ಲಿ ರಾಜಕಾರಣ ಬೇಡ: ಶಾಸಕ ಟಿ.ರಘುಮೂರ್ತಿ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 25, 2026No Comments3 Mins Read
Share WhatsApp Facebook Twitter Threads Telegram
Follow Us
Facebook Instagram
{"remix_data":[],"remix_entry_point":"challenges","source_tags":[],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false}
Share
WhatsApp Twitter Facebook Telegram

ಮೀಸಲಾತಿ ವಿಚಾರದಲ್ಲಿ ರಾಜಕಾರಣ ಬೇಡ: ಶಾಸಕ ಟಿ.ರಘುಮೂರ್ತಿ

 

ಚಿತ್ರದುರ್ಗ: ಕೇಂದ್ರ ಸರ್ಕಾರ ರಾಜಕಾರಣ ಮಾಡದೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳವನ್ನು 9ನೇ ಶೆಡ್ಯೂಲ್ (ಒಂಬತ್ತನೇ ಅನುಸೂಚಿ)ಗೆ ಸೇರಿಸಿ ನ್ಯಾಯ ಒದಗಿಸುವುದನ್ನು ಬಿಟ್ಟು ರಾಜಕಾರಣ ಮಾಡಲು ಹೊರಟಿದೆ ಎಂದು ಕೇಂದ್ರದ ವಿರುದ್ಧ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅಸಮಾಧಾನ ವ್ಯಕ್ತಪಡಿಸಿದರು.

 

ವಿಧಾನಮಂಡಲದ ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿನ್ನು 2023ರಲ್ಲಿ ಪರಿಶಿಷ್ಟ ಜಾತಿ 15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡಕ್ಕೆ 3 ರಿಂದ 7ಕ್ಕೆ ಮೀಸಲಾತಿ ರಾಜ್ಯದಲ್ಲಿ ಜಾರಿಯಲ್ಲಿತ್ತು. ಈಚೆಗೆ ಹೈಕೋರ್ಟ್‍ನಲ್ಲಿ ದಾವೆ ಹೂಡಿರುವುದರಿಂದ ಮೀಸಲಾತಿ ಹೆಚ್ಚಳಕ್ಕೆ ತಡೆಯಾಗಿ ಸದ್ಯ ಹಳೆ ಮೀಸಲಾತಿ ಜಾರಿಯಲ್ಲಿದೆ.

ಕಳೆದ ಸರ್ಕಾರದಲ್ಲಿ ಒಮ್ಮೆ ಮತ್ತು ನಮ್ಮ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಎರಡು ಬಾರಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರವು ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರಿಸಲು ಪ್ರಸ್ತಾವನೆ ಕಳಿಸಿದರೂ ಸಹ ಕೇಂದ್ರ ಸರ್ಕಾರ ಮಾತ್ರ ಸೇರಿಸಲು ಮನಸ್ಸು ಮಾಡುತ್ತಿಲ್ಲ ಎಂದರು.

 

ರಾಜ್ಯ ಸರ್ಕಾರ ಪ್ರಸ್ತುತ 50,432 ಉದ್ಯೋಗ ಭರ್ತಿ ಮಾಡುತ್ತಿದೆ. ಈ ಸಂದರ್ಭದಲ್ಲಿ ಮೀಸಲಾತಿ ಶೇ.24 ರಂತೆ ಭರ್ತಿ ಮಾಡಿದರೆ 14,543 ಹುದ್ದೆಗಳು ದೊರೆಯುತ್ತವೆ. ಮೀಸಲಾತಿ ಶೇ.18 ರಂತೆ ಭರ್ತಿ ಮಾಡಿದರೆ 11,156 ಮಾತ್ರ ದೊರೆಯುವ ಜೊತೆಗೆ 3087 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರು ಉದ್ಯೋಗದಿಂದ ವಂಚಿತರಾಗುತ್ತಾರೆ.

ಕೇಂದ್ರ ಸರ್ಕಾರ ಚುನಾವಣೆ ಸಂದರ್ಭದಲ್ಲಿ ರಾಜಕಾರಣ ಮಾಡಲಿ ಆದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರ ಬದುಕಲ್ಲಿ ಆಟವಾಡುವುದು ಬಿಟ್ಟು 2023 ರಿಂದ ಪ್ರಸ್ತಾವನೆಯನ್ನು ಹಾಗೆಯೇ ಇಟ್ಟುಕೊಂಡಿರುವ ಕೇಂದ್ರ ಸರ್ಕಾರ ಕೂಡಲೇ ಸಂವಿಧಾನದ 9 ಶೆಡ್ಯೂಲ್ ಗೆ ಸೇರಿಸುವ ಕೆಲಸ ಮಾಡಿ ನ್ಯಾಯ ಒದಗಿಸುವ ಕೆಲಸ ಮಾಡಲಿ ಎಂದು ಒತ್ತಾಯಿಸಿದರು.

 

ರಾಜ್ಯದಲ್ಲಿ ಮೀಸಲಾತಿ ಹೆಚ್ಚಳ ಸಂದರ್ಭದಲ್ಲಿ ಸಿಎಂ ಆಗಿದ್ದ ಬಸವರಾಜ್ ಬೊಮ್ಮಾಯಿ ಸೇರಿ ಹಲವು ಮಂತ್ರಿಗಳು ಈಗ ಸಂಸದರಾಗಿದ್ದು, ಪರಿಶಿಷ್ಟರ ಬದುಕಿನಲ್ಲಿ ರಾಜಕಾರಣ ಮಾಡದೇ ಕೇಂದ್ರ ಸರ್ಕಾರಕ್ಕೆ 9 ಶೆಡ್ಯೂಲ್‍ಗೆ ಸೇರಿಸಲು ಶ್ರಮಿಸಬೇಕು. ಸದ್ಯ ಮೀಸಲಾತಿ ಸಮಸ್ಯೆಯಿಂದ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿಯ ಯುವಕರಿಗೆ ಮೆಡಿಕಲ್, ಇಂಜಿನಿಯರಿಂಗ್ ಸೇರಿ ಎಲ್ಲಾ ಕೋರ್ಸ್ ಮತ್ತು ಉದ್ಯೋಗದಿಂದ ವಂಚಿತರಾಗುತ್ತಿದ್ದು ಕೂಡಲೇ ಕೇಂದ್ರ ಸರ್ಕಾರ ಈ ಸಮಸ್ಯೆಯನ್ನು ಬಗೆಹರಿಸಲು ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.

 

ನಮ್ಮ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್, ಗಾಂಧೀಜಿಯ ಕನಸು, ಸ್ವಾವಲಂಬನೆ, ಬುದ್ದನ ಕರುಣೆ, ಅಂಬೇಡ್ಕರ್ ಸಾಮಾಜಿಕ ನ್ಯಾಯ, ಬಸವಣ್ಣನವರು ಕಾಯಕ ನಿಷ್ಠೆ ಸೇರಿ ಎಲ್ಲಾ ಇಲಾಖೆಗಳಿಗೂ ನಮ್ಮ ಬಜೆಟ್‍ನಲ್ಲಿ ನ್ಯಾಯ ಒದಗಿಸಲಾಗಿದೆ ಎಂದರು.

 

ಭದ್ರಾ ಮೇಲ್ದಂಡೆ ಯೋಜನೆಯಿಂದ ನಾಲ್ಕು ಜಿಲ್ಲೆಗಳಿಗೆ ಅನುಕೂಲವಾಗಲಿದೆ. ಕೇಂದ್ರ ಸರ್ಕಾರ 22 ಸಾವಿರ ಕೋಟಿಯಿಂದ 16 ಸಾವಿರ ಕೋಟಿಗೆ ಇಳಿಸಿ 5300 ಕೋಟಿ ನೀಡುತ್ತೇವೆ ಎಂದು ತಿಳಿಸಿದ್ದರು. ಇದನ್ನು ಪ್ರಸ್ತುತ ಕೇಂದ್ರದ ತಾಂತ್ರಿಕ ಸಲಹಾ ಸಮಿತಿ ಭದ್ರಾ ಯೋಜನೆಯ ಮೊತ್ತವನ್ನು ಪುನರ್ ಪರಿಶೀಲಿಸಿ ಭದ್ರಕ್ಕೆ 6 ಸಾವಿರ ಕೋಟಿ ನೀಡುತ್ತೇವೆ ಎಂದು ತಿಳಿಸಿದ್ದಾರೆ.

 

ರಾಜ್ಯ ಬಜೆಟ್‍ನಲ್ಲಿ ಘೋಷಣೆ ಮಾಡಿರುವ ಚಿತ್ರದುರ್ಗ ಶಾಖಾ ಕಾಲುವೆ, 157 ಕೆರೆ ತುಂಬಿಸುವುದು, ಫೀಡರ್ ಚಾನಲ್ ಮುಗಿಸುತ್ತೇವೆ ಮತ್ತು 2027-2028ಕ್ಕೆ ಕಾಮಗಾರಿ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಅನುದಾನ ಒದಗಿಸಲು ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.

 

ಚಿತ್ರದುರ್ಗ ಐತಿಹಾಸಿಕ ನಗರವಾಗಿದ್ದು, ಕೇಂದ್ರದ ಗೃಹ ಸಚಿವರು 2018ರ ಚುನಾವಣೆಯಲ್ಲಿ ದುರ್ಗದಲ್ಲಿ ಮದಕರಿನಾಯಕರ ಕುರಿತ ಥೀಮ್ ಪಾರ್ಕ್ ಮಾಡುತ್ತೇವೆ ಎಂದು ಮಾತು ಕೊಟ್ಟು ಇಲ್ಲಿಯವರೆಗೂ ಯಾವ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಮದಕರಿನಾಯಕ ಥೀಮ್ ಪಾರ್ಕ್ ಮಾಡಲು ಅಗತ್ಯ ಸಹಕಾರ ರಾಜ್ಯ ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿದರು.

 

ಚಳ್ಳಕೆರೆ ಕ್ಷೇತ್ರದ ಸಾಣಿಕೆರೆ 93 ಎಕರೆ ಜಾಗ ಮೀಸಲಿದ್ದು, ಕೃಷಿ ಸಂಶೋಧನಾ ಕೇಂದ್ರ ಮಾಡಬೇಕು. ಪ್ರತಿ ವರ್ಷ ದುರ್ಗೋತ್ಸವ ಆಚರಣೆ, ಅಡಿಕೆ ಮತ್ತು ತೆಂಗು ಬೆಳೆಗೆ ಪರಿಹಾರ 6 ರಿಂದ 12 ಸಾವಿರಕ್ಕೆ ಹೆಚ್ಚಿಸಬೇಕು. ರಾಜ್ಯಕ್ಕೆ ನೀಡಿರುವ ಒಂದು ಲಕ್ಷ ಮನೆಗಳನ್ನು ಸರ್ಕಾರ ಎರಡು ಲಕ್ಷಕ್ಕೆ ಹೆಚ್ಚಳ ಮಾಡಬೇಕು. ಆಶಾ ಕಾರ್ಯಕರ್ತೆಯರಿಗೆ ಪ್ರತಿ ವರ್ಷ ಸಂಬಳ ಹೆಚ್ಚಳ ಮಾಡಬೇಕು ಎಂದು ಶಾಸಕ ಟಿ.ರಘುಮೂರ್ತಿ ಒತ್ತಾಯಿಸಿದರು.

Follow on Facebook Follow on Instagram
Share. Facebook Twitter WhatsApp Telegram
Previous Articleವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; ವೃತ್ತಿಪರ ಪ್ರವೇಶ ಪರೀಕ್ಷೆಗೆ ಉಚಿತ ತರಬೇತಿ
Next Article ಅಡಿಕೆ ಸಿಪ್ಪೆ ಕಾಂಪೋಸ್ಟ್ ತಯಾರಿಕೆ ತರಬೇತಿ; ಎಲ್ಲಿ..ಯಾವಾಗ .
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಅಮ್ಮನೆಂಬ ಆರಾಧನೆ ಮತ್ತು ಆಕೆಯ ಒಳಗಿನ ಮನುಷ್ಯತ್ವ: ಒಂದು ಆತ್ಮಾವಲೋಕನ

May 11, 2026

ಚಿತ್ರದುರ್ಗ ಜಿಲ್ಲೆಗೆ ಬರಸಿಡಿಲು; ‘ಸೋಲಿಲ್ಲದ ಸರದಾರ’ ಇನ್ನು ನೆನಪು

May 10, 2026

ಡಿಜಿಟಲ್ ಯುಗದ ಸುಲಭ ಖರ್ಚು – ಕಠಿಣ ಸಂಪಾದನೆ: ಬದಲಾದ ಜೀವನಶೈಲಿಯ ಕಟು ಸತ್ಯ

May 7, 2026
Add A Comment
Leave A Reply Cancel Reply

Advertisement
Latest Posts

ಅಮ್ಮನೆಂಬ ಆರಾಧನೆ ಮತ್ತು ಆಕೆಯ ಒಳಗಿನ ಮನುಷ್ಯತ್ವ: ಒಂದು ಆತ್ಮಾವಲೋಕನ

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.