ಚಿತ್ರದುರ್ಗ: ಹಿಂದೂಗಳ ಶ್ರದ್ಧಾ ಕೇಂದ್ರ ಧರ್ಮಸ್ಥಳದಲ್ಲಿ ತನಿಖೆಯ ಹೆಸರಲ್ಲಿ ನಡೆಯುತ್ತಿರುವ ಧರ್ಮ ದ್ರೋಹಿ ಚಟುವಟಿಕೆಗಳು ಕೂಡಲೇಸ್ಥಗಿತಗೊಳ್ಳಬೇಕು ಎಂದು ರಾಜ್ಯ ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್ ಲಿಂಗಮೂರ್ತಿ ಒತ್ತಾಯಿಸಿದ್ದಾರೆಧರ್ಮಸ್ಥಳದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಕುರಿತು ಸೋಮವಾರ ಮಾತನಾಡಿದ ಅವರು ಎಸ್ಐಟಿ ನಡೆಸುತ್ತಿರುವ ತನಿಖೆಧರ್ಮಸ್ಥಳ ಕ್ಷೇತ್ರದ ಧಾರ್ಮಿಕ ಶ್ರದ್ಧೆಗೆ ಅಪಚಾರ ಎತ್ತಾಗುವಂತಿದೆ. ಅಸಮರ್ಪಕವಾದ ತನಿಕೆಯನ್ನ ಕೂಡಲೇ ಸ್ಥಗಿತಗೊಳಿಸಿಇಲ್ಲಿಯವರೆಗೆ ನಡೆಸಿರುವ ತನಿಖೆಯ ಕುರಿತು ಮಧ್ಯಂತರ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.ಪಿ ಎಫ್ ಐ ಸೇರಿದಂತೆ ಮತಾಂತರ ಶಕ್ತಿಗಳು ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಅಪಪ್ರಚಾರದಲ್ಲಿ ತೊಡಗಿದ್ದು ಸದ್ಯ ನಡೆಯುತ್ತಿರುವತನಿಖೆ ಕೂಡ ಅದಕ್ಕೆ ಪುಷ್ಟಿ ಕೊಡುವಂತಿದೆ. ಅನಾಮಿಕ ದೂರುದಾರನ ಹೆಸರಲ್ಲಿ ಕಳೆದ 15 ದಿನಗಳಿಂದ ನಿರಂತರವಾಗಿ ಶ್ರೀ ಕ್ಷೇತ್ರಧರ್ಮಸ್ಥಳದ ತೇಜೋವದೆ ಮಾಡಲಾಗುತ್ತಿದೆ. ಸರ್ಕಾರದ ಇಂತಹ ವ್ಯವಸ್ಥೆ ಧರ್ಮಸ್ಥಳದ ಅಸಂಖ್ಯಾತ ಭಕ್ತರು ಹಾಗೂ ಹಿಂದುಗಳಿಗೆ ನೋವು ತರಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ಹಾಗೂ ಕಾರ್ಮಿಕ ಕೇಂದ್ರಗಳ ಮೇಲೆ ನಡೆಯುತ್ತಿರುವ ವ್ಯವಸ್ಥಿತ ಅಪಪ್ರಚಾರವನ್ನು ಸಹಿಸಲುಸಾಧ್ಯವಿಲ್ಲ. ತಕ್ಷಣ ಸರ್ಕಾರ ಧರ್ಮಸ್ಥಳ ಕ್ಷೇತ್ರದ ಗೌರವ ಸಂರಕ್ಷಣೆ ಮಾಡುವ ಕೆಲಸಕ್ಕೆ ಮುಂದಾಗಬೇಕು. ಸರ್ಕಾರ ಸೂಕ್ತ ಕ್ರಮಕ್ಕೆಮುಂದಾಗದಿದ್ದರೆ ಹೊಸದುರ್ಗದಿಂದ ಧರ್ಮಸ್ಥಳಕ್ಕೆ ಅಸಂಖ್ಯಾತ ಭಕ್ತರೊಂದಿಗೆ ಪಾದಯಾತ್ರೆ ನಡೆಸುವ ಮೂಲಕ ಪ್ರತಿಭಟನೆಗೆಮುಂದಾಗುತ್ತೇವೆ. ಮುಂದಿನ ಅನಾಹುತಗಳಿಗೆ ಸರ್ಕಾರವೇ ಹೊಣೆಯಾಗುತ್ತದೆ ಎಂದು ಎಸ್ ಲಿಂಗಮೂರ್ತಿ ಎಚ್ಚರಿಕೆ ನೀಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







