ಮಹಿಳಾ ಪತ್ರಕರ್ತೆ ಪ್ರಶ್ನೆಗೆ ಶಾಸಕ ಆರ್.ವಿ ದೇಶಪಾಂಡೆ ಉಡಾಫೆಯಿಂದ ಉತ್ತರ ಕೊಟ್ಟಿರುವುದು ಈಗ ವ್ಯಾಪಕ ಟೀಕೆಗೆ ಒಳಗಾಗಿದೆ. ಉತ್ತರ ಕನ್ನಡ ಜಿಲ್ಲೆಯ ಆಸ್ಪತ್ರೆ ಸಮಸ್ಯೆ ಕುರಿತು ಪ್ರಶ್ನೆ ಕೇಳಿದ ಮಹಿಳಾ ಪತ್ರಕರ್ತೆಗೆ ಪ್ರತಿಕ್ರಿಯೆ ನೀಡಿದ್ದ ದೇಶಪಾಂಡೆ, ನಿನ್ನ ಹೆರಿಗೆಗೆ ಆಸ್ಪತ್ರೆ ಮಾಡಿಸೋಣ, ಚಿಂತಿಸಬೇಡ ಎಂದು ಹೇಳಿದ್ದಾರೆ. ಈ ಹೇಳಿಕೆಗೆ ಖಂಡನೆ ವ್ಯಕ್ತವಾಗಿದ್ದು, ಪತ್ರಕರ್ತರ ಸಂಘಗಳು ತೀವ್ರ ಟೀಕೆ ವ್ಯಕ್ತಪಡಿಸಿದ್ದು, ಕ್ಷಮೆಯಾಚಿಸುವಂತೆ ಆಗ್ರಹಿಸಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೇಶಪಾಂಡೆ ಹೇಳಿಕೆಯನ್ನು ಖಂಡಿಸಿದ್ದು, ಸ್ತ್ರೀಕುಲವನ್ನು ಅವಹೇಳನ ಮಾಡುವ ರೀತಿಯಲ್ಲಿ ನೀಡಿರುವ ಅವರ ಹೇಳಿಕೆಯನ್ನು ನಾಗರಿಕ ಸಮಾಜ ಎಂದಿಗೂ ಒಪ್ಪಲಾಗದು. ದೇಶಪಾಂಡೆ ಮಹಿಳಾ ಸಮುದಾಯದ ಕ್ಷಮೆಯಾಚಿಸಲಿ ಎಂದು ಆಗ್ರಹಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







