ಚಿತ್ರದುರ್ಗ: ನಗರಸಭೆಯ ನೂತನ ಉಪಾಧ್ಯಕ್ಷರಾಗಿ ಶಕೀಲಾ ಬಾನು ಆಯ್ಕೆ ಆಗಿದ್ದಾರೆ. ಶ್ರೀದೇವಿ ಚಕ್ರವರ್ತಿ ತಮ್ಮ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿನ್ನಲೆ ಇಂದು ಚುನಾವಣೆ ನಡೆಯಿತು.12ನೆ ವಾರ್ಡಿನ ಸದಸ್ಯೆಯಾಗಿರುವ ಶಕೀಲಾ ಬಾನು ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಇಂದು ಚುನಾವಣಾಧಿಕಾರಿ ಎ ಸಿ ಮೆಹಬೂಬ್ ಜಿಲಾನಿ ನೇತೃತ್ವದ ನಡೆದ ಚುನಾವಣೆಯಲ್ಲಿ ಶಕೀಲಾ ಬಾನು ಅವರನ್ನು ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಶಕೀಲಾ ಬಾನು ಅವರಿಗೆ ಶಾಸಕ ವೀರೇಂದ್ರ ಪಪ್ಪಿ ಸನ್ಮಾನ ಮಾಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



