ಶಿವರಾಜ್ ಕುಮಾರ್ , ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿರುವ ‘45’ ಸಿನಿಮಾ ಕನ್ನಡದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಸಿನಿಮಾ ಅನ್ನು ಸಂಗೀತ ನಿರ್ದೇಶಕ ಅರ್ಜುನ ಜನ್ಯ ನಿರ್ದೇಶನ ಮಾಡಿದ್ದು, ಇದು ಅವರ ಮೊದಲ ನಿರ್ದೇಶನದ ಸಿನಿಮಾ. ಈ ಸಿನಿಮಾ ಆಗಸ್ಟ್ 15 ರಂದು ಬಿಡುಗಡೆ ಆಗಲಿದೆ ಎಂದು ಈ ಮುಂಚೆ ಘೋಷಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದಾಗಿ ಸಿನಿಮಾ ಬಿಡುಗಡೆ ನಿಗದಿತ ದಿನಾಂಕಕ್ಕೆ ಮಾಡಲಾಗಲಿಲ್ಲ. ಇದೀಗ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ.‘45’ ಕನ್ನಡ ಸಿನಿಮಾ ಡಿಸೆಂಬರ್ 25 ರಂದು ಬಿಡುಗಡೆ ಆಗಲಿದೆ. ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಆಗುವ ಕನ್ನಡ ಸಿನಿಮಾಗಳು ದೊಡ್ಡ ಹಿಟ್ ಆದ ಉದಾಹರಣೆಗಳು ಕಳೆದ ಕೆಲ ವರ್ಷಗಳಲ್ಲಿ ಇವೆ. ಇದೀಗ ‘45’ ಸಿನಿಮಾ ಸಹ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆಗೆ ಮುಂದಾಗಿದ್ದು, ಈ ಸಿನಿಮಾ ಸಹ ಹಿಟ್ ಆಗಲಿದೆಯೇ ಕಾದು ನೋಡಬೇಕಿದೆ. ಆದರೆ ಡಿಸೆಂಬರ್ ತಿಂಗಳಲ್ಲಿ ಕೆಲ ದೊಡ್ಡ ಸಿನಿಮಾಗಳು ಸಹ ಬಿಡುಗಡೆ ಆಗುತ್ತಿದ್ದು ‘45’ ಸಿನಿಮಾಕ್ಕೆ ಪ್ರಬಲ ಸ್ಪರ್ಧೆಯನ್ನು ಬಾಕ್ಸ್ ಆಫೀಸ್ನಲ್ಲಿ ಒಡ್ಡಲಿವೆ.
ಸಿನಿಮಾದ ನಿರ್ಮಾಪಕ ರಮೇಶ್ ರೆಡ್ಡಿ ಅವರು ಹೇಳಿರುವಂತೆ, ‘45’ ಸಿನಿಮಾದ ವಿತರಣೆ ಹಕ್ಕಿಗಾಗಿ ಮೈತ್ರಿ ಮೂವಿ ಮೇಕರ್ಸ್ನವರು ಸಂಪರ್ಕ ಮಾಡಿದ್ದರಂತೆ. ಆದರೆ ಸಿನಿಮಾದ ಪೂರ್ಣ ಕೆಲಸ ಮುಗಿಸಿ, ಅದನ್ನು ವಿತರಕರಿಗೆ ತೋರಿಸದ ಬಳಿಕವಷ್ಟೆ ವಿತರಣೆ ಹಕ್ಕು ಮಾರಾಟ ಮಾಡುವ ಯೋಜನೆಯನ್ನು ನಿರ್ಮಾಪಕರು ಹಾಕಿಕೊಂಡಿದ್ದಾರೆ. ಹಾಗಾಗಿ ಈಗಲೇ ಯಾರಿಗೂ ಸಹ ವಿತರಣೆ ಹಕ್ಕು ನೀಡಿಲ್ಲ.ಆಗಸ್ಟ್ 15ಕ್ಕೆ ಬಿಡುಗಡೆ ಆಗಬೇಕಿದ್ದ ಈ ಸಿನಿಮಾದ ಬಿಡುಗಡೆ ತಡವಾಗಲು ವಿಎಫ್ಎಕ್ಸ್ ಕಾರಣವಂತೆ. ಅನೇಕ ಬ್ಲಾಕ್ ಬಸ್ಟರ್, ಆಸ್ಕರ್ ವಿಜೇತ ಹಾಲಿವುಡ್ ಸಿನಿಮಾಗಳಿಗೆ ವಿಎಫ್ಎಕ್ಸ್ ಮಾಡಿರುವ ಮಾರ್ಜ್ ಸಂಸ್ಥೆ ‘45’ ಸಿನಿಮಾಕ್ಕೂ ವಿಎಫ್ಎಕ್ಸ್ ಮಾಡುತ್ತಿದ್ದು, ಸಿನಿಮಾನಲ್ಲಿ ಗ್ರಾಫಿಕ್ಸ್ ಮತ್ತು ವಿಎಫ್ಎಕ್ಸ್ ಪ್ರಮುಖವಾಗಿದ್ದು ಇದೇ ಕಾರಣಕ್ಕೆ ಸಿನಿಮಾದ ಬಿಡುಗಡೆ ಆಗಸ್ಟ್ 15 ರಂದು ಆಗಲಿಲ್ಲವಂತೆ. ಮಾರ್ಜ್ ಸಂಸ್ಥೆ ಕೆನಡಾ ಮೂಲದ್ದಾಗಿದ್ದು ಈ ಸಂಸ್ಥೆಯ ಮುಖ್ಯ ತಂತ್ರಜ್ಞ ಯಶ್ ಗೌಡ ಸಹ ಈ ಬಗ್ಗೆ ಮಾತನಾಡಿದ್ದು, ‘45’ ನಮ್ಮ ಸಂಸ್ಥೆ ವಿಎಫ್ಎಕ್ಸ್ ಮಾಡುತ್ತಿರುವ ಮೊದಲ ಕನ್ನಡ ಸಿನಿಮಾ ಆಗಿದೆ. ಕತೆಯಲ್ಲಿ ವಿಎಫ್ಎಕ್ಸ್ಗೆ ಮಹತ್ವದ ಪಾತ್ರ ಇರುವ ಕಾರಣದಿಂದಾಗಿ ಹೆಚ್ಚಿನ ಜಾಗೃತೆಯಿಂದ ಕೆಲಸ ನಡೆಯುತ್ತಿದೆ. ಸೆಪ್ಟೆಂಬರ್ 16ರ ಒಳಗೆ ಸಿನಿಮಾದ ಎಲ್ಲ ವಿಎಫ್ಎಕ್ಸ್ ಕಾರ್ಯ ಪೂರ್ಣಗೊಳ್ಳಲಿದೆ, ಅದಾದ ಒಂದು ತಿಂಗಳಲ್ಲಿ ಇನ್ನೊಂದಿಷ್ಟು ಕೆಲಸಗಳು ಇರಲಿವೆ. ಸಿನಿಮಾದ ಬಿಡುಗಡೆ ತಡವಾದರೂ ಸಿನಿಮಾದ ಗುಣಮಟ್ಟ ಅತ್ಯದ್ಭುತವಾಗಿರಲಿದೆ’ ಎಂದಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







