Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಎರಡು ದಿನ ದೆಹಲಿಗೆ ಹೊರಟ ಸಿಎಂ ಸಿದ್ದರಾಮಯ್ಯ; ಕ್ರಾಂತಿಯ ಮುನ್ಸೂಚನೆಯೇ…!?

ನಿವೇಶನ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ಪ್ರತಿಭಟನೆ

ರಾಜ್ಯದಲ್ಲಿ ರೈತ ವಿರೋಧಿ ಸರ್ಕಾರ ಇದೆ – ಡಾ.ವಿನಯ ಕುಮಾರ್

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ಪ್ರಮುಖ ಸುದ್ದಿ»ರಾಜ್ಯದಲ್ಲಿ ರೈತ ವಿರೋಧಿ ಸರ್ಕಾರ ಇದೆ – ಡಾ.ವಿನಯ ಕುಮಾರ್
ಪ್ರಮುಖ ಸುದ್ದಿ

ರಾಜ್ಯದಲ್ಲಿ ರೈತ ವಿರೋಧಿ ಸರ್ಕಾರ ಇದೆ – ಡಾ.ವಿನಯ ಕುಮಾರ್

Times of bayaluseemeBy Times of bayaluseemeJuly 29, 2025No Comments4 Mins Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ. ರೈತರ ಬಗ್ಗೆ ಎಳ್ಳಷ್ಟು ಸಹ ಕಾಳಜಿ ವಹಿಸುತ್ತಿಲ್ಲ, ನಮಗೆ
ಅನ್ನವನ್ನು ನೀಡುವ ಅನ್ನದಾತರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ, ಸಕಾಲಕ್ಕೆ ಸರಿಯಾಗಿ ಹೊಲಕ್ಕೆ ಗೊಬ್ಬರವನ್ನುನೀಡದಿದ್ದರೆ ರೈತ ವರ್ಷದ ಅನ್ನವನ್ನು ಕಳೆದುಕೊಳ್ಳುತ್ತಾನೆ ಇದರ ಬಗ್ಗೆ ಸರ್ಕಾರಕ್ಕಾಗಲಿ, ನಮ್ಮನ್ನಾಳುವ ಚುನಾಯಿತಪ್ರತಿನಿಧಿಗಳಿಗೆ ಅರಿವಿಲ್ಲ ಎಂದು ರಾಜ್ಯ ರೈತ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ವಿನಯ ಕುಮಾರ್ ಕಿಡಿ ಕಾರಿದರು.ಭಾರತೀಯ ಜನತಾ ಪಾರ್ಟಿಯ ರೈತ ಮೋರ್ಚಾದವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿಮಾತನಾಡಿದ ಅವರು, ರಾಜ್ಯ ಸರ್ಕಾರ ರಾಜ್ಯದಲ್ಲಿ ಯೂರಿಯ ಗೊಬ್ಬರ ಕೃತಕ ಅಭಾವವನ್ನು ಸೃಷ್ಟಿ ಮಾಡುವುದರ ಮೂಲಕಗೊಬ್ಬರಕ್ಕಾಗಿ ಅನ್ನದಾತರು ಅಲೆದಾಡುವಂತ ಪರಿಸ್ಥಿತಿಯನ್ನು ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಮಾಡಿದೆ. ಈ ಹಿನ್ನಲೆಯಲ್ಲಿಬಿಜೆಪಿ ರೈತರ ಪರವಾಗಿ ನಿಲ್ಲುವುದರ ಮೂಲಕ ಸದನದ ಒಳಗೂ ಹೊರಗೂ ಸಹಾ ರೈತರ ಪರವಾಗಿ ಹೋರಾಟವನ್ನುಮಾಡಲಾಗುತ್ತದೆ. ರೈತರು ಹೆದರುವ ಅಗತ್ಯ ಬೇಡ ಬಿಜೆಪಿ ನಿಮ್ಮ ಪರವಾಗಿ ಇದೆ ಎಂಬುದನ್ನು ಮರೆಯಬೇಡಿ ಎಂದರು.

ನಮ್ಮ ರಾಜ್ಯದ ಜನತೆ ನಮಗೆ ಒಳ್ಳೇಯದನ್ನು ಮಾಡಲಿ ಎಂದು ಕಾಂಗ್ರೆಸ್ ಪಕ್ಷಕ್ಕೆ ಮತವನ್ನು ನೀಡಿದರು, ಮಳೆಯನ್ನು ನಂಬಿತಮ್ಮ ಬದುಕನ್ನು ನಡೆಸುವ ಅನ್ನದಾತ ಮಳೆ ಬಂದಾಗ ಭೂಮಿಯನ್ನು ಬಿತ್ತನೆ ಮಾಡಿ ಬೆಳೆಯನ್ನು ಬೆಳೆದು ಹಸಿದವರಿಗೆ ಅನ್ನವನ್ನುನೀಡುವಂತ ಕಾರ್ಯವನ್ನು ಮಾಡುತ್ತಾನೆ ಆತ ಬೆಳೆಯನ್ನು ಬೆಳೆಯಲು ಸರ್ಕಾರ ನೆರವಾಗಬೇಕಿದೆ ಆತನಿಗೆ ಅಗತ್ಯವಾಗಿ ಬೇಕಾದಗೊಬ್ಬರ, ಬಿತ್ತನೆ ಬೀಜ, ಕ್ರಿಮಿನಾಶಕಗಳನ್ನು ನೀಡಬೇಕಿದೆ, ಆದರೆ ರಾಜ್ಯ ಸರ್ಕಾರ ರೈತನಿಗೆ ಸರಿಯಾದ ರೀತಿಯಲ್ಲಿ ಗೊಬ್ಬರವನ್ನುನೀಡದೆ ರೈತ ಶಾಪಕ್ಕೆ ಗುರಿಯಾಗಿದೆ. ಆಗಸ ಸಾಕಿದ ಕತ್ತೇನೆ ತನ್ನನ್ನು ಸಾಕಿದವನಿಗೆ ನಿಯತ್ತಾಗಿ ಕೆಲಸವನ್ನು ಮಾಡುತ್ತದೆ ಆದರೆತಮಗೆ ಮತವನ್ನು ನೀಡಿದ ಮತದಾರರಿಗೆ ಸರಿಯಾದ ರೀತಿಯಲ್ಲಿ ಸೌಲಭ್ಯವನ್ನು ನೀಡುತ್ತಿಲ್ಲ ಎಂದು ದೂರಿದರು.ರಾಜ್ಯ ಸರ್ಕಾರ ಮಳೆಗಾಲದಲ್ಲಿ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಸೌಲಭ್ಯವನ್ನು ನೀಡಬೇಕಿದೆ ಆದರೆ ಇದರ ಬಗ್ಗೆತಲೆಕೆಡಿಸಿಕೊಳ್ಳದ ರಾಜ್ಯ ಸರ್ಕಾರ ತನ್ನ ಅಧಿಕಾರವನ್ನು ಉಳಿಸಿಕೊಳ್ಳುವುದಕ್ಕಾಗಿ ಹಲವಾರು ಬಾರಿ ದೆಹಲಿ ಪ್ರವಾಸ ಮಾಡಿದರೂಸಹಾ ಒಮ್ಮೆಯೂ ಸಹಾ ರೈತರ ಸಮಸ್ಯೆಯ ಬಗ್ಗೆ ಸಂಬಂಧಪಟ್ಟ ಸಚಿವರಾಗಲೀ, ಅಧಿಕಾರಿಗಳ ಬಳಿಯಾಗಲಿ ಮಾತನಾಡಿಲ್ಲಎಂದ ಅವರು, ಕೇಂದ್ರಕ್ಕೆ ಬರೀ ಪತ್ರವನ್ನು ಬರೆಯುವುದು ಮಾತ್ರ ಆಗದೆ ನಿಜವಾದ ರೀತಿಯಲ್ಲಿ ಕೆಲಸವಾಗಬೇಕಿದೆ ಸಿದ್ದರಾಮಯ್ಯರವರ ಸಚಿವ ಸಂಪುಟದಲ್ಲಿ ಇರುವ ಸಚಿವರಲ್ಲಿ ಒಂದೊಂದು ರೀತಿಯಲ್ಲಿ ಹೇಳಿಕೆಯನ್ನು ನೀಡುತ್ತಿದ್ದಾರೆ, ಮುಂಗಾರಿಗೆ ಅಗತ್ಯವಾಗಿಬೇಕಾದ ಎಲ್ಲಾ ರೀತಿಯಸಹಕಾರವನ್ನು ಕೇಂದ್ರ ಸರ್ಕಾರ ನೀಡಿದೆ ಆದರೆ ರಾಜ್ಯ ಸರ್ಕಾರ ಪಡೆಯುವಲ್ಲಿ ವಿಫಲವಾಗಿದೆ ಎಂದು
ರಾಜ್ಯ ಸರ್ಕಾರದ ವಿರುದ್ದ ಆಕ್ರೋಶವನ್ನು ವ್ಯಕ್ತಪಡಿಸಿದರು.

ಯುಪಿಎ ಸರ್ಕಾರದಲ್ಲಿ ನಿಂತು ಹೋಗಿದ್ದ ಯೂರಿಯ ಗೊಬ್ಬರ ಕೈಗಾರಿಕೆಗಳನ್ನು ನಮ್ಮ ಸರ್ಕಾರದಲ್ಲಿ ಪುನಶ್ಚೇತಗೊಳಿಸಲಾಗಿದೆಇದರಿಂದ ದೇಶದಲ್ಲಿ ಯೂರಿಯದ ಸಮಸ್ಯೆಯನ್ನು ನಿವಾರಣೆ ಮಾಡಲು ಸರ್ಕಾರ ಮೂಂದಾಗಿದೆ. ರಾಜ್ಯ ಸರ್ಕಾರ ಕಾಳಸಂತೇಗಾರರೊಂದಿಗೆ ಮಾಡಿಕೊಂಡ ಒಪ್ಪಂದದಿಂದ ರಾಜ್ಯದಲ್ಲಿ ಯೂರಿಯ ಗೊಬ್ಬರದ ಅಭಾವ ತಲೆದೂರಿದೆ. ರಾಜ್ಯದಲ್ಲಿಇರುವಂತ ಕೈಗಾರಿಕೆಗಳಲ್ಲಿ ಧಾಳಿಯನ್ನು ಮಾಡಿಸಿದರೆ ಅಲ್ಲಿ ಸಂಗ್ರಹವಾಗಿರುವ ಗೊಬ್ಬರ ಸಿಗುತ್ತದೆ ಇದರಿಂದ ರೈತರಿಗೆಲಾಭವಾಗಲಿದೆ. ಸಾವಿರಾರು ವರ್ಷಗಳಿಂದ ಮನುಕುಲವನ್ನು ಉಳಿಸಿರುವುದು ರೈತ ಆತನಿಗೆ ಯಾವುದೇ ರೀತಿಯಲ್ಲಿತೊಂದರೆಯನ್ನು ಮಾಡಬೇಡಿ, ನಿಮ್ಮ ಭ್ರಷ್ಠಾಚಾರವನ್ನು ಬೇರೆ ಕಡೆಗಳಲ್ಲಿ ಮಾಡಿ ಆದರೆ ಅನ್ನದಾತನಿಗೆ ಮಾಡಬೇಡಿ ಎಂದು ರಾಜ್ಯಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದರು.ಮುಂಗಾರು ಹಂಗಾಮಿಗೆ ರಾಜ್ಯದಿಂದ ಸುಮಾರು 6.30 ಲಕ್ಷ ಟನ್ ಗೊಬ್ಬರದ ಪ್ರಸ್ತಾವನೆ ಕಳಿಸಿದ್ದು, ಕೇಂದ್ರವು 7.70 ಲಕ್ಷ ಟನ್ಗೊಬ್ಬರವನ್ನು ಕೊಟ್ಟಿದೆ. ಬೇಡಿಕೆಗಿಂತ ಹೆಚ್ಚು ಕೊಟ್ಟಾಗ ಹಾಹಾಕಾರ ಏಕೆ..? ಕಡಿಮೆ ಹೇಗಾಗಿದೆ? ಇದನ್ನು ಆಡಳಿತ ಮಾಡುವವರುಆಲೋಚಿಸಬೇಕಿದೆ. ಗೊಬ್ಬರದ ಕಳ್ಳ ವ್ಯಾಪಾರಿಗಳು ಕೆಲವರಿದ್ದಾರೆ. ಅವರು ಮಾರುಕಟ್ಟೆಯಲ್ಲಿ ಗೊಬ್ಬರದ ಕೃತಕ ಅಭಾವ ಸೃಷ್ಟಿಸಿ,ಹೆಚ್ಚಿನ ಹಣಕ್ಕೆ ರೈತರಿಗೆ ಮಾರಾಟ ಮಾಡುತ್ತಿದ್ದಾರೆ ಎಂದು ದೂರಿದರು. ಮುಂಗಾರು ಹಂಗಾಮು ಪ್ರಾರಂಭಕ್ಕೆ ಮೊದಲೇ ನಾವು ಈಹಂಗಾಮಿನಲ್ಲಿ ರಾಜ್ಯದಲ್ಲಿ ಎಷ್ಟು ಹೆಕ್ಟೇರ್ ಬಿತ್ತನೆ ಮಾಡುತ್ತೇವೆ? ಯಾವ್ಯಾವ ಬೆಳೆ ಬಿತ್ತನೆ ಆಗಲಿದೆ? ಡಿಎಪಿ, ಯೂರಿಯಾ ಸೇರಿ
ಎಷ್ಟು ಗೊಬ್ಬರ ಬೇಕಾಗಲಿದೆ?- ಇವೆಲ್ಲ ಮಾಹಿತಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಸಭೆಯ ಮೂಲಕ ಪಡೆಯಬೇಕಿತ್ತು. ಎಂದರು.

ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ರಾಜ್ಯದ ರೈತರಿಗೆ ಸರ್ಕಾರ ಯೂರಿಯ ಗೊಬ್ಬರವನ್ನು ನೀಡುವಲ್ಲಿ
ವಿಫಲವಾಗಿದೆ, ಈ ವರ್ಷ ನಮ್ಮ ಜಿಲ್ಲೆಗೆ ಉತ್ತಮವಾದ ಮಳೆಯಾಗಿದೆ ರೈತರು ಸಹಾ ಬಿತ್ತನೆ ಮಾಡಲು ಮುಂದಾಗಿದ್ದಾರೆ.
ಹವಮಾನ ಇಲಾಖೆಯೂ ಈ ಭಾರಿ ರಾಜ್ಯದಲ್ಲಿ ಉತ್ತಮವಾದ ಮಳೆಯಾ ಗಲಿದೆ ಎಂಬ ಸೂಚನೆಯನ್ನು ನೀಡಿದೆ ಆದರೂ ಸಹಾಸರ್ಕಾರ ಬಿತ್ತನೆಯ ಬಗ್ಗೆ ಯಾವ ಕಾಳಜಿಯನ್ನು ತೆಗೆದುಕೊಂಡಿಲ್ಲ, ಚಿತ್ರದುರ್ಗ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಲಿ,ಅಧಿಕಾರಿಗಳಾಗಲೀ ಇದರ ಬಗ್ಗೆ ಕಾಳಜಿಯನ್ನು ವಹಿಸಿಲ್ಲ, ಇದುವರೆವಿಗೂ ಸಭೆಯನ್ನು ಮಾಡಿಲ್ಲ, ಬಿತ್ತನೆಯನ್ನು ಮಾಡಿದಹೊಲಗಳಿಗೆ ಕಾಲಕ್ಕೆ ಸರಿಯಾಗಿ ಯೂರಿಯ ಗೊಬ್ಬರವನ್ನು ನೀಡದೇ ಹೋದರೆ ಬೆಳೆ ಹಾಳಾಗುತ್ತದೆ ರೈತ ನಷ್ಠಕ್ಕೆ ಒಳಗಾಗುತ್ತಾನೆ,ಇದರ ಬಗ್ಗೆ ಸರ್ಕಾರ ಆಲೋಚನೆಯನ್ನು ಸಹಾ ಮಾಡಿಲ್ಲ ಎಂದು ದೂರಿದರು.
ಮಾಜಿ ಶಾಸಕರಾದ ಎಸ್.ಕೆ.ಬಸವರಾಜನ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರನ್ನು ನೆಮ್ಮದಿಯಾಗಿ ಇರಲು
ಬಿಡುತ್ತಿಲ್ಲ, ಒಂದಲ್ಲಾ ಒಂದು ಸಂಕಷ್ಟಕ್ಕೆ ಈಡು ಮಾಡುತ್ತಿದೆ. ಸರ್ಕಾರ ಸರಿಯಾದ ರೀತಿಯಲ್ಲಿ ಗೊಬ್ಬರವನ್ನು ನೀಡದಿದ್ದರೆ ವರ್ಷದಬೆಳೆ ಹಾಳಾಗುತ್ತದೆ. ಕೇಂದ್ರ ಸರ್ಕಾರ ಗೊಬ್ಬರವನ್ನು ನೀಡಿದೆ ಆದರೆ ರಾಜ್ಯ ಸರ್ಕಾರ ಅದನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರಿಗೆ ನೆರವಾಗಿ ಅವರಿಗೆ ನೀಡಿದೆ. ಬೇರೆ ಜಿಲ್ಲೆಗಳಿಗೆ ಹೊಲಿಸಿದರೆ ನಮ್ಮ ಜಿಲ್ಲೆ ವಾಣೀಜ್ಯ ಬೆಳೆಗಳಾಗದೆ ಆಹಾರದಬೆಳೆಗಳಾಗಿದೆ. ರೈತರ ಸಂಕಷ್ಟದಲ್ಲಿ ಯಾವುದೆ ರಾಜಕೀಯವನ್ನು ಬೆರಸದೇ ಮಾನವೀಯತೆಯಿಂದ ನೋಡುವಂತ
ಕಾರ್ಯವಾಗಬೇಕಿದೆ ಎಂದರು.ಬಿಜೆಪಿ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ವೆಂಕಟೇಶ್ ಯಾದವ್ ಮಾತನಾಡಿ, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ರೈತ ವಿರೋಧಿಸರ್ಕಾರವಾಗಿದೆ. ರೈತರ ಬಗ್ಗೆ ಎಳ್ಳಷ್ಟು ಸಹ ಕಾಳಜಿ ವಹಿಸುತ್ತಿಲ್ಲ. ತಮ್ಮ ಅಧಿಕಾರ ಕುರ್ಚಿ ಉಳಿವಿಗಾಗಿ ಸಿದ್ದರಾಮಯ್ಯನಿರತರಾಗಿದ್ದಾರೆ. ದೆಹಲಿಯಲ್ಲಿ ರೈತರ ಬಗ್ಗೆ ಕೇಂದ್ರ ಕೃಷಿ ಸಚಿವರನ್ನಾಗಲೀ.ಸಂಬಂಧಪಟ್ಟ ಅಧಿಕಾರಿಗಳನ್ನಾಗಲೀ ಭೇಟಿ ಮಾಡಿನಮ್ಮ ರಾಜ್ಯಕ್ಕೆ ಯೂರಿಯಾ ಬೇಡಿಕೆ ಬಗ್ಗೆ ಬೇಡಿಕೆಯನ್ನು ಇಟ್ಟಿಲ್ಲ.ರೈತರೆಲ್ಲರೂ ಸಹ ಬಿತ್ತನೆ ಕಾರ್ಯವನ್ನು ಪ್ರಾರಂಭ ಮಾಡಿದ್ದಾರೆ..

ಎಲ್ಲಾ ರೈತರಿಗೂ ಯೂರಿಯಾ ಗೊಬ್ಬರದ ಅವಶ್ಯಕತೆಯಿದೆ.ಇದರ ಬಗ್ಗೆ ಗಮನಹರಿಸಿದ ಸಿದ್ದರಾಮಯ್ಯರವರು ಅನ್ನದಾತರ ಬಗ್ಗೆಯಾವುದೇ ಗಮನ ನೀಡಿಲ್ಲ ಎಂದು ಆರೋಪಿಸಿದರು.ನಗರದ ನೀಲಕಂಠೇಶ್ವರ ದೇವಾಲಯದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಪ್ರತಿಭಟನೆಯನ್ನು ನಡೆಸಿದ್ದು, ದಾರಿಯುದ್ದಕ್ಕೂರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗುವುದರ ಮೂಲಕ ರೈತರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.ಈ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿಯಾದ ಮಲ್ಲಿಕಾರ್ಜನ್,ಮಾಜಿ ಅಧ್ಯಕ್ಷರಾದ ಮುರಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮ ದಾಸ್, ನಗರಾಧ್ಯಕ್ಷ ಲೋಕೇಶ್, ಗ್ರಾಮಾಂತರ ಅಧ್ಯಕ್ಷನಾಗರಾಜ್, ನಾಯಕನಹಟ್ಟಿ ಮಂಡಲ ಅಧ್ಯಕ್ಷ ಮಲ್ಲೇಶ್, ಮೊಳಕಾಲ್ಮೂರು ಅಧ್ಯಕ್ಷ ಶ್ರೀರಾಮರೆಡ್ಡಿ, ಚಳ್ಳಕೆರೆ ಅಧ್ಯಕ್ಷ ಸುರೇಶ್ಮಧುರೆ, ಜಿಲ್ಲಾ ಉಪಾಧ್ಯಕ್ಷ ಕಲ ಸೀತರಾಮರೆಡ್ಡಿ, ಜಿ.ಪಂ.ಮಾಜಿ ಸದಸ್ಯ ರಮೇಶ್, ಯುವ ಮುಖಂಡ ಡಾ.ಸಿದ್ದಾರ್ಥ ಗುಡಾರ್ಪಿ, ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೂರಮ್ಮನಹಳ್ಳಿ ನಾಗರಾಜ್, ಕವನ, ಸುಮಾ, ಕವಿತಾ, ರೇಖಾ, ರತ್ಮಮ್ಮ ಪಾಪೇಶ್ ನಾಯ್ಕ್,ನಾಗರಾಜ ಬೇದ್ರೇ, ವೆಂಕಟೇಶ್ ಶಂಭು, ಕಿರಣ್ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕಿನ ರೈತರು ಇತರರು ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
DR.Vinay kumar Former aginst government have state
Follow on Google News Follow on Instagram
Share. Facebook Twitter Telegram WhatsApp
Previous Articleಸರ್ಕಾರದ ಯೋಜನೆಗಳನ್ನು ಕಾರ್ಮಿಕರು ಸದುಪಯೋಗ ಮಾಡಿಕೊಳ್ಳಬೇಕು – ಸಚಿವ ಸಂತೋಷ್ ಲಾಡ್
Next Article ನಿವೇಶನ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ಪ್ರತಿಭಟನೆ
Times of bayaluseeme
  • Website

Related Posts

ಎರಡು ದಿನ ದೆಹಲಿಗೆ ಹೊರಟ ಸಿಎಂ ಸಿದ್ದರಾಮಯ್ಯ; ಕ್ರಾಂತಿಯ ಮುನ್ಸೂಚನೆಯೇ…!?

July 29, 2025

ಸರ್ಕಾರದ ಯೋಜನೆಗಳನ್ನು ಕಾರ್ಮಿಕರು ಸದುಪಯೋಗ ಮಾಡಿಕೊಳ್ಳಬೇಕು – ಸಚಿವ ಸಂತೋಷ್ ಲಾಡ್

July 29, 2025

ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

July 29, 2025
Add A Comment
Leave A Reply Cancel Reply

Advertisement
Latest Posts

ಎರಡು ದಿನ ದೆಹಲಿಗೆ ಹೊರಟ ಸಿಎಂ ಸಿದ್ದರಾಮಯ್ಯ; ಕ್ರಾಂತಿಯ ಮುನ್ಸೂಚನೆಯೇ…!?

ನಿವೇಶನ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ಪ್ರತಿಭಟನೆ

ರಾಜ್ಯದಲ್ಲಿ ರೈತ ವಿರೋಧಿ ಸರ್ಕಾರ ಇದೆ – ಡಾ.ವಿನಯ ಕುಮಾರ್

ಸರ್ಕಾರದ ಯೋಜನೆಗಳನ್ನು ಕಾರ್ಮಿಕರು ಸದುಪಯೋಗ ಮಾಡಿಕೊಳ್ಳಬೇಕು – ಸಚಿವ ಸಂತೋಷ್ ಲಾಡ್

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.