ಮಂಗಳೂರು: ಧರ್ಮಸ್ಥಳ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದ್ದು ಇದರ ಮಧ್ಯೆ MBBS ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ ಕೂಡ ದೊಡ್ಡ ಸದ್ದು ಮಾಡಿತ್ತು. ಇನ್ನು ಪ್ರಕರಣವನ್ನು ಎಸ್ಐಟಿಗೆ ವಹಿಸುತ್ತಿದ್ದಂತೆ ದೂರು ನೀಡಿದ್ದ ಸುಜಾತಾ ಭಟ್ ಇದೀಗ ವರಸೆ ಬದಲಾಯಿಸಿದ್ದಾರೆ. ಅನನ್ಯಾ ಭಟ್ ಕುರಿತಂತೆ ದಾಖಲೆಗಳನ್ನು ತೋರಿಸುವಂತೆ ಒತ್ತಡ ತೀವ್ರವಾಗಿದ್ದರಿಂದ ದಿಢೀರ್ ಅಂತ ಮಹಿಳೆಯೊಬ್ಬರ ಫೋಟೋವನ್ನು ಸುಜಾತಾ ಭಟ್ ತೋರಿಸಿದ್ದರು.ಈ ಫೋಟೋದಲ್ಲಿರುವುದು ಅನನ್ಯಾ ಭಟ್ ಅಲ್ಲ. ಬದಲಿಗೆ ವಾಸಂತಿ ಎಂಬ ಆರೋಪಗಳು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಸುಜಾತಾ ಭಟ್ ಆರೋಪದ ಬಗ್ಗೆ ಅನುಮಾನಗಳು ಮೂಡಿದ್ದವು. ಇನ್ನು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅನನ್ಯಾ ಭಟ್ ನಾಪತ್ತೆ ಪ್ರಕರಣವನ್ನು ಎಸ್ಐಟಿಗೆ ರವಾನಿಸಲಾಗಿತ್ತು. ಹೀಗಾಗಿ ಎಸ್ಐಟಿ ಅಧಿಕಾರಿಗಳು ಪ್ರಕರಣದ ವಿವರ ನೀಡುವಂತೆ ಸುಜಾತಾ ಭಟ್ಗೆ ನೋಟಿಸ್ ನೀಡಿದೆ. ಆದರೆ ಎಸ್ಐಟಿ ನೋಟಿಸ್ಗೆ ಉತ್ತರಿಸದ ಸುಜಾತಾ ಭಟ್, ಆಡಿಯೋವೊಂದನ್ನು ಹರಿಬಿಟ್ಟು ಕೇಸ್ ವಾಪಾಸ್ ಪಡೆಯುವುದಾಗಿ ಹೇಳಿದ್ದಾರೆ.2003ರಲ್ಲಿ ಧರ್ಮಸ್ಥಳಕ್ಕೆ ಬಂದಿದ್ದ ಅನನ್ಯಾ ಭಟ್ ಕಾಣೆಯಾಗಿದ್ದಾಳೆ ಎಂದು ಆರೋಪಿಸಿ ಸುಜಾತಾ ಭಟ್ ಇದೇ ಜುಲೈ 15ಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಿದ ದೂರು ದಾಖಲಿಸಿದ್ದರು. ನನ್ನ ಮಗಳು ಬದುಕಿದ್ದಾಳೆ ಇಲ್ಲವೋ ಗೊತ್ತಿಲ್ಲ. ಸತ್ತಿದ್ದರೆ ಆಕೆಯ ಕಳೇಬರವನ್ನಾದರೂ ಹುಡುಕಿಕೊಡಿ ಶಾಸ್ತ್ರೋಕ್ತವಾಗಿ ಅಂತ್ಯ ಸಂಸ್ಕಾರ ಮಾಡುವುದಾಗಿ ಹೇಳಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







