ಹವಾಮಾನದಲ್ಲಿ ತೀವ್ರ ಬದಲಾವಣೆ: ರಾಜ್ಯದಲ್ಲಿ ಮಳೆ–ಗಾಳಿ
ದೇಶದ ವಿವಿಧ ಭಾಗಗಳಲ್ಲಿ ಹವಾಮಾನದಲ್ಲಿ ತೀವ್ರ ಬದಲಾವಣೆ ಕಂಡುಬಂದಿದ್ದು, ಪಶ್ಚಿಮ ಅಲೆಗಳು ಮತ್ತು ದಕ್ಷಿಣ ಮಾರುತಗಳ ಸಂಯೋಜಿತ ಪರಿಣಾಮದಿಂದ ಅನಿಶ್ಚಿತ ವಾತಾವರಣ ನಿರ್ಮಾಣವಾಗಿದೆ. ಉತ್ತರ ಭಾರತದಿಂದ ದಕ್ಷಿಣ ಹಾಗೂ ಈಶಾನ್ಯ ರಾಜ್ಯಗಳವರೆಗೆ ವಿಭಿನ್ನ ಹವಾಮಾನ ಮಾದರಿಗಳು ಒಂದೇ ಸಮಯದಲ್ಲಿ ಕಾಣಿಸುತ್ತಿವೆ.
ಭಾರತೀಯ ಹವಾಮ ಇಲಾಖೆ ಮಾಹಿತಿ ಪ್ರಕಾರ, ಮಾರ್ಚ್ 26ರಿಂದ 30ರವರೆಗೆ ಈ ಹವಾಮಾನ ಚಟುವಟಿಕೆಗಳು ಸಕ್ರಿಯವಾಗಿರಲಿವೆ. ಈ ಅವಧಿಯಲ್ಲಿ ಗಾಳಿಯ ವೇಗ ಗಂಟೆಗೆ 30ರಿಂದ 50 ಕಿ.ಮೀ.ವರೆಗೆ ಹೆಚ್ಚಾಗುವ ಸಾಧ್ಯತೆ ಇದ್ದು, ಕೆಲವೆಡೆ 70 ಕಿ.ಮೀ.ವರೆಗೆ ಗಾಳಿ ಬೀಸುವ ಎಚ್ಚರಿಕೆ ನೀಡಲಾಗಿದೆ.
ದೆಹಲಿಯಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಸಂಜೆ ವೇಳೆಗೆ ತುಂತುರು ಮಳೆಯ ಸಾಧ್ಯತೆ ಇದೆ. ಗಾಳಿಯ ವೇಗ 20–30 ಕಿ.ಮೀ. ಇರಬಹುದು.
ಉತ್ತರ ಪ್ರದೇಶದಲ್ಲಿ ಗುಡುಗು ಸಹಿತ ಮಿಂಚು ಮತ್ತು ಆಲಿಕಲ್ಲು ಮಳೆಯ ಎಚ್ಚರಿಕೆ ನೀಡಲಾಗಿದೆ. ಸುಮಾರು 15 ಜಿಲ್ಲೆಗಳಲ್ಲಿ ಗಾಳಿಯ ವೇಗ 50–60 ಕಿ.ಮೀ. ತಲುಪಬಹುದು. ಇದರಿಂದ ಗೋಧಿ ಸೇರಿದಂತೆ ರಬಿ ಬೆಳೆಗಳಿಗೆ ಹಾನಿಯಾಗುವ ಭೀತಿ ಇದೆ.
ಉತ್ತರಖಂಡದ ರುದ್ರಪ್ರಯಾಗ, ಬಾಗೇಶ್ವರ, ಪಿಥೋರಗಢ, ಚಮೋಲಿ, ಉತ್ತರಕಾಶಿ ಜಿಲ್ಲೆಗಳಲ್ಲಿ ಮಳೆ ಮತ್ತು ಹಿಮಪಾತದ ಎಚ್ಚರಿಕೆ ಇದೆ. ತಾಪಮಾನ ಇಳಿಕೆಯಿಂದ ಶೀತ ಹೆಚ್ಚಾಗುವ ಸಾಧ್ಯತೆ ಇದೆ.
ಹಿಮಾಚಲ ಪ್ರದೇಶದ ಶಿಮ್ಲಾ, ಕುಲ್ಲು, ಕಾಂಗ್ರಾ, ಮಂಡಿ ಭಾಗಗಳಲ್ಲಿ ಮಳೆ ಹಾಗೂ ಹಿಮಪಾತ ಮುಂದುವರಿಯುವ ಸಾಧ್ಯತೆ ಇದೆ. ಭೂಕುಸಿತ ಮತ್ತು ರಸ್ತೆ ತಡೆ ಸಮಸ್ಯೆಗಳ ಸಾಧ್ಯತೆ ಹೆಚ್ಚಾಗಿದೆ.
ಕರ್ನಾಟಕ ಸೇರಿದಂತೆ ಕೇರಳ, ತಮಿಳು ನಾಡು ಮತ್ತು ಆಂದ್ರ ಪ್ರದೇಶದಲ್ಲಿ ರ ಗುಡುಗು ಸಹಿತ ಮಳೆಯ ಎಚ್ಚರಿಕೆ ನೀಡಲಾಗಿದೆ.
ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಕೊಡಗು, ಚಿಕ್ಕಮಗಳೂರು ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.
ಮುಂಬೈ ಸೇರಿದಂತೆ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಸ್ವಲ್ಪ ಬದಲಾವಣೆಗಳೊಂದಿಗೆ ಹವಾಮಾನ ಸಾಮಾನ್ಯವಾಗಿರಬಹುದು. ವಿದರ್ಭ ಮತ್ತು ಮರಾಠವಾಡ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ, ತುಂತುರು ಮಳೆ ಹಾಗೂ ಗಾಳಿ ಬೀಸುವ ಸಾಧ್ಯತೆ ಇದೆ.
ಮುಂದಿನ ಕೆಲವು ದಿನಗಳು ದೇಶಾದ್ಯಂತ ಅಸ್ಥಿರ ಹವಾಮಾನ ಮುಂದುವರಿಯಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಹವಾಮಾನ ಇಲಾಖೆ ಮನವಿ ಮಾಡಿದೆ.
