Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ಕುದಾಪುರದ ಬಳಿ ಭಾರತೀಯ ವಿಜ್ಞಾನ ಕೇಂದ್ರ ಆವರಣದಲ್ಲಿ ಸೈನ್ಸ್ ಪಾರ್ಕ್ – ಡಾ.ಸಂಜಯ್ ಎಸ್ ಬಿಜ್ಜೂರ್

ಕುರುಡಿಹಳ್ಳಿಯಲ್ಲಿ ಭಾರಿ ಮಳೆ ಕನ್ನೇನಹಳ್ಳಿ ಕಾವಲ್ ರಸ್ತೆ ಬಂದ್

ಮೊಳಕಾಲ್ಮೂರು ವಸತಿ ಶಾಲೆಗಳಿಗೆ ಎಸಿ ದಿಢೀರ್ ಭೇಟಿ; ಶಾಲೆಯ ಸಿಬ್ಬಂದಿ ತಬ್ಬಿಬ್ಬು

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ಪ್ರಮುಖ ಸುದ್ದಿ»ಬಿಜೆಪಿ ಏನೇ ಮಾಡಿದ್ರೂ ಬಾಯಿಮುಚ್ಚಿಕೊಂಡು ಕೂರಲು ಆಗಲ್ಲ – ಡಿಕೆಶಿ
ಪ್ರಮುಖ ಸುದ್ದಿ

ಬಿಜೆಪಿ ಏನೇ ಮಾಡಿದ್ರೂ ಬಾಯಿಮುಚ್ಚಿಕೊಂಡು ಕೂರಲು ಆಗಲ್ಲ – ಡಿಕೆಶಿ

Times of bayaluseemeBy Times of bayaluseemeAugust 4, 2025No Comments2 Mins Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ಬೆಂಗಳೂರು: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನಕ್ಕೆ ಮೂರು ದಿನಗಳ ಶೋಕಾಚರಣೆ ಹಿನ್ನೆಲೆಯಲ್ಲಿ ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ ಪ್ರತಿಭಟನಾ ಸಭೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿ, ಶಿಬು ಸೊರೇನ್ ಬುಡಕಟ್ಟು ಸಮುದಾಯದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷದ ಬಹುಕಾಲದ ಮೈತ್ರಿ ನಾಯಕರು. ಅವರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಶಿಬು ಸೊರೇನ್ ಅವರಿಗೆ ಗೌರವ ಸಲ್ಲಿಸಬೇಕು. ಅವರ ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಆತುರದಲ್ಲಿ ಮಾಡುವುದು ಬೇಡ ಎಂಬ ಕಾರಣಕ್ಕೆ ಈ ತೀರ್ಮಾನಕ್ಕೆ ಬರಲಾಗಿದೆ. ಶೋಕಾಚರಣೆ ಆಚರಿಸುವ ದಿನ ದೇಶಕ್ಕೆ ಒಂದು ಸಂದೇಶ ನೀಡುವ ಕಾರ್ಯಕ್ರಮ ಬೇಡ ಎಂದು ನಿರ್ಧರಿಸಿದ್ದೇವೆ. ಈ ವಿಚಾರವಾಗಿ ನಮ್ಮ ನಾಯಕರ ಜೊತೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ” ಎಂದರು.

ಮಂಗಳವಾರದ ಕಾರ್ಯಕ್ರಮಕ್ಕೆ ಮಾಡಿಕೊಂಡಿರುವ ಸಿದ್ಧತೆ ಹಾಗೇ ಮುಂದುವರಿಸಿಕೊಂಡು ಹೋಗಬೇಕು ಎಂದು ಪಕ್ಷದ ನಾಯಕರು, ಶಾಸಕರು, ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ. 8ರಂದು ಅದೇ ಸ್ಥಳದಲ್ಲಿ, ಅದೇ ಸಮಯಕ್ಕೆ ನಡೆಯಲಿದೆ. ನಮ್ಮ ಕಾರ್ಯಕರ್ತರು, ಮುಖಂಡರು ಹಾಗೂ ಮತದಾರರು ಈ ಹೋರಾಟದಲ್ಲಿ ಭಾಗವಹಿಸಲು ಬಹಳ ಉತ್ಸುಕರಾಗಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ನಿಗದಿಯಾಗಿದ್ದ ರಾಹುಲ್ ಗಾಂಧಿ ಅವರ ಮಾಧ್ಯಮಗೋಷ್ಠಿಯನ್ನು ಕೂಡ ಮುಂದೂಡಲಾಗಿದ್ದು, ನಾಳೆ ಅಂತ್ಯಕ್ರಿಯೆ ನಂತರ ಇದರ ಬಗ್ಗೆ ಚರ್ಚಿಸಿ ಮಾಹಿತಿಯನ್ನು ಅವರು ತಿಳಿಸಲಿದ್ದಾರೆ” ಎಂದು ತಿಳಿಸಿದರು.ಶಿಬು ಸೊರೇನ್ ಅವರು ಕಷ್ಟ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ನಿಂತಿದ್ದಾರೆ. ನರಸಿಂಹ ರಾವ್ ಅವರ ಕಾಲ ಸೇರಿದಂತೆ ಎಲ್ಲಾ ಸಮಯದಲ್ಲೂ ಕಾಂಗ್ರೆಸ್ ಪಕ್ಷದ ಪರ ಬಂಡೆಯಂತೆ ನಿಂತದ್ದರು. ಪಕ್ಷದ ಸಿದ್ಧಾಂತದ ಜೊತೆ ನಿಂತು ನಮ್ಮ ಸರ್ಕಾರಕ್ಕೆ ಅವರು, ಅವರ ಸರ್ಕಾರಕ್ಕೆ ನಾವು ಬೆಂಬಲವಾಗಿ ನಿಂತಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾವು ಪ್ರಾರ್ಥಿಸುತ್ತೇವೆ ಎಂದರು.

“ಆಗಸ್ಟ್ 8ರಂದು ವರಮಹಾಲಕ್ಷ್ಮಿ ಹಬ್ಬವಿದ್ದರೂ ಪಕ್ಷದ ಕೆಲಸಕ್ಕೆ ಆದ್ಯತೆ ನೀಡುತ್ತಿದ್ದೇವೆ. ಹಬ್ಬದ ಪ್ರಯುಕ್ತ ಪೂಜೆ ಮಾಡಲು ಹಾಗೂ ಪ್ರಾರ್ಥನೆ ಮಾಡಲು ನಾವು ಯಾರಿಗೂ ಅಡ್ಡಿಪಡಿಸುವುದಿಲ್ಲ. ಪಕ್ಷದ ಹೋರಾಟಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಮುಖಂಡರು, ಕಾರ್ಯಕರ್ತರಲ್ಲಿ ಮಾಧ್ಯಮಗಳ ಮೂಲಕ ಮನವಿ ಮಾಡಿಕೊಳ್ಳುತ್ತೇನೆ. ಮತ್ತೊಮ್ಮೆ ಶಾಸಕಾಂಗ ಪಕ್ಷದ ಸಭೆ ಕರೆಯಲು ನಮ್ಮ ನಾಯಕರು ಮಾರ್ಗದರ್ಶನ ನೀಡಿದ್ದು, ಸಿಎಂ ಜೊತೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿಯವರು ಚುನಾವಣಾ ಆಯೋಗದ ಪರವಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟಿಸುವವರು, ಟೀಕಿಸುವವರನ್ನು ಸ್ವಾಗತಿಸುತ್ತೇವೆ. ಅವರು ಏನು ಹೇಳಬೇಕೋ ಹೇಳಲಿ. ನೀವುಗಳು ಹೇಳಿದಂತೆ ಅವರು ಚುನಾವಣಾ ಆಯೋಗವನ್ನು ಸಮರ್ಥಿಸಿಕೊಂಡು ಪ್ರತಿಭಟಿಸುತ್ತಿದ್ದಾರೆ. ಚುನಾವಣಾ ಆಯೋಗ ಸರಕಾರದ ಭಾಗವಾಗಿದೆ. ಹೀಗಾಗಿ ಇದನ್ನು ಮಾಡುತ್ತಿದ್ದಾರೆ. ಚುನಾವಣಾ ಆಯೋಗ ನಿಷ್ಪಕ್ಷಪಾತ ಹಾಗೂ ನ್ಯಾಯಪೀಠ ಸ್ಥಾನದಲ್ಲಿ ಇರಬೇಕು. ನ್ಯಾಯಪೀಠದಿಂದ ಅನ್ಯಾಯ ಆಗಬಾರದು. ಎಲ್ಲರಿಗೂ ನ್ಯಾಯ ಸಿಗಬೇಕು ಎಂಬುದು ನಮ್ಮ ಆಶಯ. ವಿಧಾನಸಭೆ ಚುನಾವಣೆ ಸಮಯದಲ್ಲೇ ಮಹದೇವಪುರ ಕ್ಷೇತ್ರದ ನಮ್ಮ ಅಭ್ಯರ್ಥಿ ಸೂಕ್ತ ದಾಖಲೆಯೊಂದಿಗೆ ದೂರು ನೀಡಿದ್ದರು. ಅವರ ದೂರಿಗೆ ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಈ ವಿಚಾರವಾಗಿ ಅಧ್ಯಯನ ನಡೆಸಿದ ನಂತರ ಮತ್ತಷ್ಟು ಅಂಶಗಳು ಬೆಳಕಿಗೆ ಬಂದಿವೆ. ಈ ವಿಚಾರ ತಡವಾಗಿ ಬಹಿರಂಗವಾಗುತ್ತಿರಬಹುದು, ಹಾಗೆಂದು ನಾವು ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ. ನಮ್ಮ ಅಧ್ಯಯನದ ಅಂಶಗಳನ್ನು ಸಾರ್ವಜನಿಕರ ಮುಂದೆ ಇಡುತ್ತೇವೆ. ನಂತರ ಯಾರು ಸರಿ, ಯಾರು ತಪ್ಪು ಎಂಬುದನ್ನು ಜನ ತೀರ್ಮಾನ ಮಾಡಲಿ” ಎಂದು ತಿಳಿಸಿದರು.ಶಾಸಕಾಂಗ ಸಭೆ ಬಗ್ಗೆ ಕೇಳಿದಾಗ, “ಈ ಕಾರ್ಯಕ್ರಮದ ಉದ್ದೇಶಕ್ಕೆ ಬೆಂಗಳೂರಿಗೆ ಆಗಮಿಸುತ್ತಿರುವ ಶಾಸಕರ ಜೊತೆ ಚರ್ಚೆ ಮಾಡಲು ನಮ್ಮ ನಾಯಕರು ಹೇಳಿದ್ದಾರೆ” ಎಂದು ಸ್ಪಷಪಡಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
bjp by dk shivakumar done not quit we whatever
Follow on Google News Follow on Instagram
Share. Facebook Twitter Telegram WhatsApp
Previous Articleಹಿಂದೂಗಳನ್ನು ಕೊಂದ ಟಿಪ್ಪು ಹೆಸರನ್ನು KRS ಜಲಾಶಯಕ್ಕಿಡಲು ಸರ್ಕಾರ ಮುಂದಾಗಿದೆ – ಆರ್.ಅಶೋಕ್
Next Article ಇಂದಿನಿಂದ ಚಿತ್ರದುರ್ಗ ನಗರದಲ್ಲಿ ‘ಅಕ್ಕ ಕೆಫೆ’ ಆರಂಭ; ಕೆಫೆಯಲ್ಲಿ ಏನೆಲ್ಲ ಸಿಗುತ್ತೆ ಗೊತ್ತೇ…?
Times of bayaluseeme
  • Website

Related Posts

ವಿನಯ್ ರಾಜ್ ಕುಮಾರ್ ಹೊಸ ಚಿತ್ರ ಘೋಷಣೆ; ಸ್ಟಾರ್ ನಿರ್ದೇಶಕನ ಆಕ್ಷನ್ ಕಟ್

August 7, 2025

ದರ್ಶನ್ ಫ್ಯಾನ್ಸ್ ಕೊಳಚೆ ಇದ್ದಂಗೆ ಎಂದ ಮಾಡೆಲ್ ಸೋನು

August 7, 2025

ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು; ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

August 7, 2025
Add A Comment
Leave A Reply Cancel Reply

Advertisement
Latest Posts

ಕುದಾಪುರದ ಬಳಿ ಭಾರತೀಯ ವಿಜ್ಞಾನ ಕೇಂದ್ರ ಆವರಣದಲ್ಲಿ ಸೈನ್ಸ್ ಪಾರ್ಕ್ – ಡಾ.ಸಂಜಯ್ ಎಸ್ ಬಿಜ್ಜೂರ್

ಕುರುಡಿಹಳ್ಳಿಯಲ್ಲಿ ಭಾರಿ ಮಳೆ ಕನ್ನೇನಹಳ್ಳಿ ಕಾವಲ್ ರಸ್ತೆ ಬಂದ್

ಮೊಳಕಾಲ್ಮೂರು ವಸತಿ ಶಾಲೆಗಳಿಗೆ ಎಸಿ ದಿಢೀರ್ ಭೇಟಿ; ಶಾಲೆಯ ಸಿಬ್ಬಂದಿ ತಬ್ಬಿಬ್ಬು

ವಿನಯ್ ರಾಜ್ ಕುಮಾರ್ ಹೊಸ ಚಿತ್ರ ಘೋಷಣೆ; ಸ್ಟಾರ್ ನಿರ್ದೇಶಕನ ಆಕ್ಷನ್ ಕಟ್

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.