ಧರ್ಮಸ್ಥಳ ಕೇಸ್; ಶವ ಹೂತಿಟ್ಟ 13 ಸ್ಥಳಗಳನ್ನು ಗುರುತು ಮಾಡಿದ ಸಾಕ್ಷಿದರ
ಮಂಗಳೂರು: ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣ ಸಂಬಂಧ ದೂರುದಾರ ಸದ್ಯ 13 ಸ್ಥಳಗಳನ್ನು ಗುರುತು ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಎಸ್ಐಟಿ ಬೆಳಗ್ಗೆ ಸ್ನಾನಘಟ್ಟದ ಎಡಭಾಗದಲ್ಲಿರುವ ಅರಣ್ಯ ಸ್ಥಳದಲ್ಲಿ ಪರಿಶೀಲನೆ ಮಾಡಿತ್ತು. ಬಳಿಕ ನೇತ್ರಾವತಿ ಸೇತುವೆ ಹಾಗೂ ಸ್ನಾನಘಟ್ಟದ ಮಧ್ಯಭಾಗದ ಕಾಡಿನಲ್ಲಿ ಸ್ಥಳ ಪರಿಶೀಲಿಸಿ, ಮೂರನೇ ಸ್ಥಳವಾಗಿ ನೇತ್ರಾವತಿ ಸ್ನಾನಘಟ್ಟದ ಬಲ ಭಾಗದ ಅಜಿಕುರಿ ರಸ್ತೆಯಲ್ಲಿ ಸ್ಥಳ ಪರಿಶೀಲನೆ ಮಾಡಿತ್ತು. ಸದ್ಯ ಈವರೆಗೆ ದೂರುದಾರ 13 ಸ್ಥಳಗಳನ್ನು ಗುರುತು ಮಾಡಿದ್ದಾರೆ ಎನ್ನಲಾಗಿದೆ.
ನೇತ್ರಾವತಿ ಸ್ನಾನಘಟ್ಟ ಹಾಗೂ ಸಮೀಪದ ಕಾಡಿನಲ್ಲಿ ಒಳಗೆ 1 ಕಿ.ಮೀ. ವ್ಯಾಪ್ತಿಯಲ್ಲಿ ಸುಮಾರು 2 ಗಂಟೆಗಳ ಕಾಲ ಸ್ಥಳ ಮಹಜರು ನಡೆಸಿದ್ದರು. ದೂರುದಾರ ತಂದಿರುವ ತಲೆಬುರುಡೆಯಲ್ಲಿದ್ದ ಮಣ್ಣಿನ ತಾಳೆಗಾಗಿ ನೇತ್ರಾವತಿ ಸ್ನಾನಘಟ್ಟದ ಅರಣ್ಯ ಪ್ರದೇಶದಲ್ಲಿ ಮಣ್ಣನ್ನು ಎಸ್ಐಟಿ ಸಂಗ್ರಹಿಸಿದೆ. ನಂತರ ದೂರುದಾರನನ್ನು ಧರ್ಮಸ್ಥಳ ಪೊಲೀಸ್ ಠಾಣೆಗೆ ಎಸ್ಐಟಿ ತಂಡ ಕರೆದೊಯ್ದಿದೆ. ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು
ಎಸ್ಐಟಿ ವಿಚಾರಣೆ ವೇಳೆ ದೂರುದಾರ, ತಲೆ ಬುರುಡೆಯನ್ನು ನೇತ್ರಾವತಿ ಸ್ನಾನಘಟ್ಟದ ಬಳಿಯಿಂದ ಹೊರತೆಗೆದಿರುವುದಾಗಿ ತಿಳಿಸಿದ್ದ. ಈ ಹಿನ್ನೆಲೆ ಎಸ್ಐಟಿ ತಂಡವು ವಿಧಿ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು, ಕಂದಾಯ ಇಲಾಖೆ, ಅರಣ್ಯ ಇಲಾಖೆ ಮತ್ತು ಸರ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬಳಿಕ ಸ್ಥಳ ಮಹಜರು ಆರಂಭಿಸಿದ್ದರು.
ಎಸ್ಐಟಿ ಅಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ ಮತ್ತು ಎಸ್ಪಿ ಸಿ.ಎ.ಸೈಮನ್, ಅರಣ್ಯ ಇಲಾಖೆಯ ರೇಂಜರ್ ತ್ಯಾಗರಾಜ್ ಸೇರಿ ಇನ್ನಿತರರ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಯಿತು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



