ಬೆಂಗಳೂರು: ಬಿಜೆಪಿಯಿಂದ ಉಚ್ಚಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾನ್ ಅಡ್ಜಸ್ಟ್ಮೆಂಟ್ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.ರಾಜ್ಯದ ಆರ್ಥಿಕ ಸಂಕಷ್ಟ ಪರಿಸ್ಥಿತಿಯನ್ನು ವಿವರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಂದಿನ ಬಿಜೆಪಿ ಸರ್ಕಾರವು 2019-23ರ ಅವಧಿಯಲ್ಲಿ ಹಣವಿಲ್ಲದೆ ಮಸೂದೆಗಳನ್ನು ಅಂಗೀಕರಿಸಿದೆ ಎಂದು ಆರೋಪಿಸಿದ ನಂತರ ಯತ್ನಾಳ್ ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಹೇಳಿದರು.ಸಿದ್ದರಾಮಯ್ಯ ಅವರಿಗೆ ನಮ್ಮಿಬ್ಬರ ಬೆಂಬಲ ಸಿಕ್ಕಿದೆ. ನಿಮ್ಮನ್ನೂ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಜೆಡಿಎಸ್ನಿಂದ ಉಚ್ಚಾಟಿಸಿದ್ದರು. ಹೀಗೆ ಉಚ್ಚಾಟಿಸಲ್ಪಟ್ಟವರು ಮುಂದೊಂದು ದಿನ ಮುಖ್ಯಮಂತ್ರಿಯಾಗುತ್ತಾರೆ ಅಂತಾ ಯತ್ನಾಳ್ ಹೇಳಿದರು. ಇದಕ್ಕೆ ಲಘು ಹಾಸ್ಯದ ದಾಟಿಯಲ್ಲಿ ಪ್ರತಿಕ್ರಿಯಿಸಿದ ಸಿಎಂ, ನೀವೂ ಮುಖ್ಯಮಂತ್ರಿಯಾದ್ರೆ ನನಗೆ ಸಂತೋಷ ಎಂದರು.
ಆದರೆ ಯಾವ ಪಕ್ಷದಿಂದ ಸಿಎಂ ಆಗ್ತೀರಾ..? ಎಂದು ಯತ್ನಾಳ್ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ, ಹೊಸ ಪಕ್ಷ ಕಟ್ಟುವಂತೆ ಸೂಚಿಸಿದರು. ಅದಕ್ಕೆ ಉತ್ತರಿಸಿದ ಯತ್ನಾಳ್, ನಾನ್ ಅಡ್ಜಸ್ಟ್ಮೆಂಟ್ ಪಕ್ಷ ಕಟ್ಟುತ್ತೇನೆ. ಅದು ಬಿಜೆಪಿಯ ಮತಗಳನ್ನು ಕಡಿಮೆ ಮಾಡಿದರೆ ಚಿಂತಿಸಬೇಡಿ. ಇದು ನಿಮಗೆ ಸಹಾಯ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದರೆ ಯತ್ನಾಳ್ ಹೊಸ ಪಕ್ಷ ಆರಂಭಿಸಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಅವರ ಪುತ್ರ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಕುಟುಂಬ ಆಡಳಿತ ಹಾಗೂ ಸಿದ್ದರಾಮಯ್ಯ- ಯಡಿಯೂರಪ್ಪ ಅವರ ಹೊಂದಾಣಿಕೆ ರಾಜಕೀಯ ವಿರುದ್ಧ ವಿರುದ್ಧ ಪದೇ ಪದೇ ಟೀಕೆ ಮಾಡುವ ಮೂಲಕ ಆರು ವರ್ಷಗಳ ಕಾಲ ಬಿಜೆಪಿಯಿಂದ ಯತ್ನಾಳ್ ಉಚ್ಚಾಟಿತರಾಗಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







